ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ