ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ