ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ಆಯ್ಕೆಯಾಗಿದ್ದಾರೆ.ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿರುವ ಆನಂದ ಜಿರ್ಲಿ ಅವರು ರಿಯಲ್ ಎಸ್ಟೇಟ್ ಉದ್ಯಮದಲ್ಲು ಸಕ್ರಿಯರಾಗಿದ್ದಾರೆ. ಈಚೇಗೆ ದಾವಣಗೆರೆ ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದು ಅದರಲ್ಲಿ ಸಭಾಪತಿಯಾಗಿ ಆರ್.ಜೆ.ದತ್ತರಾಜು,ಉಪ ಸಭಾಪತಿಯಾಗಿ ಶಿವಕುಮಾರ ಬೆಳ್ಳೂಡಿ,ಜಿಲ್ಲಾ ಕಾರ್ಯದರ್ಶಿಯಾಗಿ ಆನಂದ ಜಿರ್ಲಿ,ಖಜಾಂಚಿಯಾಗಿ ಕಿರಣ ಜೈನ್ ಆಯ್ಕೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಬಳಿ ಇದ್ದ