ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ಬುದ್ಧ,,ಬಸವ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಪ್ರಮುಖರಾದ ಅನಿಲ ಹೊಸಮನಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ್ ಹೈಸ್ಕೂಲ್ ಆವರಣದಲ್ಲಿ ಈ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಮೇಳಕ್ಕೆ ಸಾಹಿತ್ಯ ಬಳಗದಿಂದಲೇ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಲಾಗುತ್ತಿದ್ದು ಯಾವುದೇ ರಾಜಕಾರಣಿಯ ಬಳಿ ಇದಕ್ಕಾಗಿ ಕೈಒಡ್ಡಿಲ್ಲ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಮಂಡಿಸಿದ "ಎ ಸ್ಟಡಿ ಆಫ್ ಲರ್ನಿಂಗ್ ಟೀಚಿಂಗ್ ಅಂಡ್ ಥಿಂಕಿAಗ್ ಸ್ಟೈಲ್ ಆಫ್ ಪ್ರಾಸ್ಪೆಕ್ಟಿವ್ ಟೀಚರ್ಸ್ ಇನ್ ರಿಲೇಶನ್ ಟು ದೇಆರ್ ಟೀಚಿಂಗ್ ಕಾಂಪಿಟನ್ಸ" ವಿಷಯದ ಮೇಲೆ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ. ಹಾಲಿ ವಿಜಯಪುರದ ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ