ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ