ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ