ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ