ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.