ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ