ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ