ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.