ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ