If we do not prove that we have demanded money, we will file a defamation case - actor

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ ಬಗ್ಗೆ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಚಾಲಕ ಹರೀಶ ನಾಟೀಕಾರ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮದೇವತೆ ಜಾತ್ರಾ ಕಮೀಟಿಯಲ್ಲಿ ಇದ್ದವರು ಯಾರು ಎಂಬುದೇ ನನಗೆ ಗೊತ್ತಿಲ್ಲ. ಇವರ ಬಳಿ ಹಣ ಕೇಳಿದ್ದೇನೆ ಎಂಬುದಕ್ಕೆ ಬಹಿರಂಗವಾಗಿ ಸಾಕ್ಷಿಗಳನ್ನು ಇಡಬೇಕು. ಅದು ಬಿಟ್ಟು ಬೇಜವಾಬ್ದಾರಿಯುತ ಹೇಳಿಕೆಗಳನ್ನು ಕೊಟ್ಟರೆ ಹೋರಾಟಗಾರರ ಆತ್ಮಸ್ತೈರ್ಯ ಕುಂದುವುದಿಲ್ಲ. ಪುರಸಭೆ ಅಧ್ಯಕ್ಷರು ಜಾತಿವಾದಿಗಳಾಗಿದ್ದಾರೆ. ಕೆರೆ ದಂಡೆಯಲ್ಲಿದ್ದ ತಮ್ಮ ಜನಾಂಗದವರ ಅಂಗಡಿ, ಮನೆಗಳನ್ನು ತೆರವು ಮಾಡದೇ ಮೃದು ಧೋರಣೆ ಅನುಸರಿಸಿದ್ದು ಇತರೆ ಜನಾಂಗದವರಿಗೆ ಅನ್ಯಾಯ ಮಾಡಿದ್ದಾರೆ.

ಎಸ್.ಸಿ., ಎಸ್ಟಿ ಜನಾಂಗದವರ ಮನೆಗಳನ್ನು ಒಡೆದು ಹಾಕಿದ್ದಾರೆ ಎಂದು ಆರೋಪಿಸಿದರು.
ನನ್ಮ 35 ವರ್ಷದ ಹೋರಾಟದ ಬದುಕಿನಲ್ಲಿ ಯಾರ ಬಳಿಯೂ ಕೈಚಾಚಿಲ್ಲ. ನನ್ನ ಗುತ್ತಿಗೆದಾರಿಕೆ ಕೆಲಸದಿಂದ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೇನೆ. ಪುರಸಭೆ ಅಧ್ಯಕ್ಷರು ಯಾರೊಬ್ಬರ ಬಗ್ಗೆ ಮಾತನಾಡಬೇಕಾದರೆ ವಿಚಾರಿಸಿ ಎಲ್ಲ ಸಂಗತಿಗಳನ್ನು ತಿಳಿದುಕೊಂಡು ಮಾತನಾಡಬೇಕಿತ್ತು. ಆದರೆ, ಇವರೊಬ್ಬ ಜಾತಿವಾದಿ ಎಂದು ಆರೋಪಿಸಿದರು.

ಪುರಸಭೆಯಲ್ಲಿ ದಲಿತ ಸಮಾಜದ ನೌಕರರನ್ನು ಹಗುರವಾಗಿ ಮಾತನಾಡಿಸುತ್ತಾರೆ.ಜಾತಿ ಎತ್ತಿ ಮಾತನಾಡುತ್ತಾರೆ. ಮಾಡಿದ ಆರೋಪ ಸಾಬೀತು ಮಾಡದಿದ್ದರೆ ಅಧ್ಯಕ್ಷರ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರು ಎಂದು ದೂರಿದರು. ಆರೋಪ ಸಾಬೀತಾಗದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ