If we do not prove that we have demanded money, we will file a defamation case - actor

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ ಬಗ್ಗೆ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ದಲಿತ ಸಂಘರ್ಷ ಸಮೀತಿ ಜಿಲ್ಲಾ ಸಂಚಾಲಕ ಹರೀಶ ನಾಟೀಕಾರ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮದೇವತೆ ಜಾತ್ರಾ ಕಮೀಟಿಯಲ್ಲಿ ಇದ್ದವರು ಯಾರು ಎಂಬುದೇ ನನಗೆ ಗೊತ್ತಿಲ್ಲ. ಇವರ ಬಳಿ ಹಣ ಕೇಳಿದ್ದೇನೆ ಎಂಬುದಕ್ಕೆ ಬಹಿರಂಗವಾಗಿ ಸಾಕ್ಷಿಗಳನ್ನು ಇಡಬೇಕು. ಅದು ಬಿಟ್ಟು ಬೇಜವಾಬ್ದಾರಿಯುತ ಹೇಳಿಕೆಗಳನ್ನು ಕೊಟ್ಟರೆ ಹೋರಾಟಗಾರರ ಆತ್ಮಸ್ತೈರ್ಯ ಕುಂದುವುದಿಲ್ಲ. ಪುರಸಭೆ ಅಧ್ಯಕ್ಷರು ಜಾತಿವಾದಿಗಳಾಗಿದ್ದಾರೆ. ಕೆರೆ ದಂಡೆಯಲ್ಲಿದ್ದ ತಮ್ಮ ಜನಾಂಗದವರ ಅಂಗಡಿ, ಮನೆಗಳನ್ನು ತೆರವು ಮಾಡದೇ ಮೃದು ಧೋರಣೆ ಅನುಸರಿಸಿದ್ದು ಇತರೆ ಜನಾಂಗದವರಿಗೆ ಅನ್ಯಾಯ ಮಾಡಿದ್ದಾರೆ.

ಎಸ್.ಸಿ., ಎಸ್ಟಿ ಜನಾಂಗದವರ ಮನೆಗಳನ್ನು ಒಡೆದು ಹಾಕಿದ್ದಾರೆ ಎಂದು ಆರೋಪಿಸಿದರು.
ನನ್ಮ 35 ವರ್ಷದ ಹೋರಾಟದ ಬದುಕಿನಲ್ಲಿ ಯಾರ ಬಳಿಯೂ ಕೈಚಾಚಿಲ್ಲ. ನನ್ನ ಗುತ್ತಿಗೆದಾರಿಕೆ ಕೆಲಸದಿಂದ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೇನೆ. ಪುರಸಭೆ ಅಧ್ಯಕ್ಷರು ಯಾರೊಬ್ಬರ ಬಗ್ಗೆ ಮಾತನಾಡಬೇಕಾದರೆ ವಿಚಾರಿಸಿ ಎಲ್ಲ ಸಂಗತಿಗಳನ್ನು ತಿಳಿದುಕೊಂಡು ಮಾತನಾಡಬೇಕಿತ್ತು. ಆದರೆ, ಇವರೊಬ್ಬ ಜಾತಿವಾದಿ ಎಂದು ಆರೋಪಿಸಿದರು.

ಪುರಸಭೆಯಲ್ಲಿ ದಲಿತ ಸಮಾಜದ ನೌಕರರನ್ನು ಹಗುರವಾಗಿ ಮಾತನಾಡಿಸುತ್ತಾರೆ.ಜಾತಿ ಎತ್ತಿ ಮಾತನಾಡುತ್ತಾರೆ. ಮಾಡಿದ ಆರೋಪ ಸಾಬೀತು ಮಾಡದಿದ್ದರೆ ಅಧ್ಯಕ್ಷರ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರು ಎಂದು ದೂರಿದರು. ಆರೋಪ ಸಾಬೀತಾಗದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ