If we want change in society, we have to change first: Minister Lad

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಹುಬ್ಬಳ್ಳಿ ಆ. 17: ಸ್ವಾತಂತ್ರ್ಯ ಪೂರ್ವದಲ್ಲಿ ಶೇ 20 ರಿಂದ 25 ರಷ್ಟು ಸಾಕ್ಷರತೆ ಇತ್ತು. ಇಂದು ಶೇ 75 ರಷ್ಟು ಸಾಕ್ಷರತೆ ಸಾಧಿಸಲಾಗಿದೆ. ಶೇ. 87 ರಷ್ಟು ಯುವಕರಿಗೆ ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ದೇಶದಲ್ಲಿರುವ ಪರಿಸ್ಥಿತಿಯನ್ನು ಇದ್ದ ಹಾಗೆ ಹೇಳಬೇಕು. ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜನರು ಮುಂದಾಗಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್ ಲಾಡ್ ಅವರು ತಿಳಿಸಿದರು.

ಛಬ್ಬಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಬದಲಾವಣೆ ಆಗಬೇಕಿದ್ದರೆ ಮೊದಲು ನಮ್ಮನ್ನು ನಾವು ಬದಲಾಯಿಸಿಕೊಳ್ಳಬೇಕು. ಬುದ್ಧ, ಬಸವ, ಅಂಬೇಡ್ಕರ ಅವರ ಮಾರ್ಗದಲ್ಲಿ ನಾವು ಕೂಡ ಸಾಗಬೇಕಿದೆ. ಎಲ್ಲರಿಗೂ ಸಮಪಾಲು ಸಮಬಾಳು ಸಿಗಬೇಕು. ಎಲ್ಲರನ್ನೂ ಗೌರವದಿಂದ ಕಾಣಬೇಕು. ದೇಶದ ಏಕತೆ ಎಂದೂ ಅಳಿಯುವುದಿಲ್ಲ ಎಂದರು.

ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಹೆತ್ತ ತಂದೆ ತಾಯಿಯನ್ನು ಮೊದಲು ಗೌರವಿಸಬೇಕು. ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಬೇಕಾಗುತ್ತದೆ. ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸುಮಾರು 40 ವರ್ಷದ ಬಳಿಕ ಛಬ್ಬಿ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣ ಮಾಡಲಾಗಿದೆ. ವಿಶೇಷ ಕಾಳಜಿ ಮೂಲಕ ಗ್ರಾಮಕ್ಕೆ ಪ್ರೌಢಶಾಲೆ ಬಂದಿದೆ. ದೇವಸ್ಥಾನದ ಘಂಟೆಗಿಂತ ಶಾಲೆಯ ಘಂಟೆಗಳು ಜಾಸ್ತಿ ಶಬ್ಧ ಮಾಡಬೇಕು. 6500 ಗ್ರಾಮ ಪಂಚಾಯತಿಗಳಿಗೆ ಒಂದು ಕೆಪಿಎಸ್ ಶಾಲೆ ಸ್ಥಾಪನೆ ಆಗಬೇಕು. 4,000 ಶಾಲೆಗಳಿಗೆ ದ್ವಿಭಾಷೆ ಅಳವಡಿಸಲಾಗುತ್ತಿದೆ. 5,000 ಎಲ್ ಕೆಜಿ, ಯುಕೆಜಿ ಶಾಲೆ ತೆರೆಯಲಾಗುವುದು. 25 ಸಾವಿರ ಮಕ್ಕಳಿಗೆ ಉಚಿತವಾಗಿ ನೀಟ್, ಜೆಇಇ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕರಾದ ಎಂ.ಆರ್.ಪಾಟೀಲ್, ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನುಮಕ್ಕನವರ, ಚಲನಚಿತ್ರ ನಟಿ ಸಪ್ತಮಿ ಗೌಡ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಯೂಟರ್ ಲ್ಯಾಬ್ ಅನ್ನು ಗಣ್ಯರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಡಿಡಿಪಿಐ ಎಸ್.ಎಸ್.ಕೆಳದಿಮಠ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಛಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷ ರವಿ ಹುಲ್ಲಂಬಿ, ಸದಸ್ಯರು, ಪಿಡಿಒ ಚಂದ್ರಶೇಖರ ಪೂಜಾರಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ