If we want change in society, we have to change first: Minister Lad

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಹುಬ್ಬಳ್ಳಿ ಆ. 17: ಸ್ವಾತಂತ್ರ್ಯ ಪೂರ್ವದಲ್ಲಿ ಶೇ 20 ರಿಂದ 25 ರಷ್ಟು ಸಾಕ್ಷರತೆ ಇತ್ತು. ಇಂದು ಶೇ 75 ರಷ್ಟು ಸಾಕ್ಷರತೆ ಸಾಧಿಸಲಾಗಿದೆ. ಶೇ. 87 ರಷ್ಟು ಯುವಕರಿಗೆ ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ದೇಶದಲ್ಲಿರುವ ಪರಿಸ್ಥಿತಿಯನ್ನು ಇದ್ದ ಹಾಗೆ ಹೇಳಬೇಕು. ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜನರು ಮುಂದಾಗಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್ ಲಾಡ್ ಅವರು ತಿಳಿಸಿದರು.

ಛಬ್ಬಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಬದಲಾವಣೆ ಆಗಬೇಕಿದ್ದರೆ ಮೊದಲು ನಮ್ಮನ್ನು ನಾವು ಬದಲಾಯಿಸಿಕೊಳ್ಳಬೇಕು. ಬುದ್ಧ, ಬಸವ, ಅಂಬೇಡ್ಕರ ಅವರ ಮಾರ್ಗದಲ್ಲಿ ನಾವು ಕೂಡ ಸಾಗಬೇಕಿದೆ. ಎಲ್ಲರಿಗೂ ಸಮಪಾಲು ಸಮಬಾಳು ಸಿಗಬೇಕು. ಎಲ್ಲರನ್ನೂ ಗೌರವದಿಂದ ಕಾಣಬೇಕು. ದೇಶದ ಏಕತೆ ಎಂದೂ ಅಳಿಯುವುದಿಲ್ಲ ಎಂದರು.

ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಹೆತ್ತ ತಂದೆ ತಾಯಿಯನ್ನು ಮೊದಲು ಗೌರವಿಸಬೇಕು. ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಬೇಕಾಗುತ್ತದೆ. ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸುಮಾರು 40 ವರ್ಷದ ಬಳಿಕ ಛಬ್ಬಿ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣ ಮಾಡಲಾಗಿದೆ. ವಿಶೇಷ ಕಾಳಜಿ ಮೂಲಕ ಗ್ರಾಮಕ್ಕೆ ಪ್ರೌಢಶಾಲೆ ಬಂದಿದೆ. ದೇವಸ್ಥಾನದ ಘಂಟೆಗಿಂತ ಶಾಲೆಯ ಘಂಟೆಗಳು ಜಾಸ್ತಿ ಶಬ್ಧ ಮಾಡಬೇಕು. 6500 ಗ್ರಾಮ ಪಂಚಾಯತಿಗಳಿಗೆ ಒಂದು ಕೆಪಿಎಸ್ ಶಾಲೆ ಸ್ಥಾಪನೆ ಆಗಬೇಕು. 4,000 ಶಾಲೆಗಳಿಗೆ ದ್ವಿಭಾಷೆ ಅಳವಡಿಸಲಾಗುತ್ತಿದೆ. 5,000 ಎಲ್ ಕೆಜಿ, ಯುಕೆಜಿ ಶಾಲೆ ತೆರೆಯಲಾಗುವುದು. 25 ಸಾವಿರ ಮಕ್ಕಳಿಗೆ ಉಚಿತವಾಗಿ ನೀಟ್, ಜೆಇಇ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕರಾದ ಎಂ.ಆರ್.ಪಾಟೀಲ್, ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನುಮಕ್ಕನವರ, ಚಲನಚಿತ್ರ ನಟಿ ಸಪ್ತಮಿ ಗೌಡ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಯೂಟರ್ ಲ್ಯಾಬ್ ಅನ್ನು ಗಣ್ಯರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಡಿಡಿಪಿಐ ಎಸ್.ಎಸ್.ಕೆಳದಿಮಠ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಛಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷ ರವಿ ಹುಲ್ಲಂಬಿ, ಸದಸ್ಯರು, ಪಿಡಿಒ ಚಂದ್ರಶೇಖರ ಪೂಜಾರಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ