If we want change in society, we have to change first: Minister Lad

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಹುಬ್ಬಳ್ಳಿ ಆ. 17: ಸ್ವಾತಂತ್ರ್ಯ ಪೂರ್ವದಲ್ಲಿ ಶೇ 20 ರಿಂದ 25 ರಷ್ಟು ಸಾಕ್ಷರತೆ ಇತ್ತು. ಇಂದು ಶೇ 75 ರಷ್ಟು ಸಾಕ್ಷರತೆ ಸಾಧಿಸಲಾಗಿದೆ. ಶೇ. 87 ರಷ್ಟು ಯುವಕರಿಗೆ ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ದೇಶದಲ್ಲಿರುವ ಪರಿಸ್ಥಿತಿಯನ್ನು ಇದ್ದ ಹಾಗೆ ಹೇಳಬೇಕು. ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜನರು ಮುಂದಾಗಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್ ಲಾಡ್ ಅವರು ತಿಳಿಸಿದರು.

ಛಬ್ಬಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಬದಲಾವಣೆ ಆಗಬೇಕಿದ್ದರೆ ಮೊದಲು ನಮ್ಮನ್ನು ನಾವು ಬದಲಾಯಿಸಿಕೊಳ್ಳಬೇಕು. ಬುದ್ಧ, ಬಸವ, ಅಂಬೇಡ್ಕರ ಅವರ ಮಾರ್ಗದಲ್ಲಿ ನಾವು ಕೂಡ ಸಾಗಬೇಕಿದೆ. ಎಲ್ಲರಿಗೂ ಸಮಪಾಲು ಸಮಬಾಳು ಸಿಗಬೇಕು. ಎಲ್ಲರನ್ನೂ ಗೌರವದಿಂದ ಕಾಣಬೇಕು. ದೇಶದ ಏಕತೆ ಎಂದೂ ಅಳಿಯುವುದಿಲ್ಲ ಎಂದರು.

ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಹೆತ್ತ ತಂದೆ ತಾಯಿಯನ್ನು ಮೊದಲು ಗೌರವಿಸಬೇಕು. ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಬೇಕಾಗುತ್ತದೆ. ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸುಮಾರು 40 ವರ್ಷದ ಬಳಿಕ ಛಬ್ಬಿ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣ ಮಾಡಲಾಗಿದೆ. ವಿಶೇಷ ಕಾಳಜಿ ಮೂಲಕ ಗ್ರಾಮಕ್ಕೆ ಪ್ರೌಢಶಾಲೆ ಬಂದಿದೆ. ದೇವಸ್ಥಾನದ ಘಂಟೆಗಿಂತ ಶಾಲೆಯ ಘಂಟೆಗಳು ಜಾಸ್ತಿ ಶಬ್ಧ ಮಾಡಬೇಕು. 6500 ಗ್ರಾಮ ಪಂಚಾಯತಿಗಳಿಗೆ ಒಂದು ಕೆಪಿಎಸ್ ಶಾಲೆ ಸ್ಥಾಪನೆ ಆಗಬೇಕು. 4,000 ಶಾಲೆಗಳಿಗೆ ದ್ವಿಭಾಷೆ ಅಳವಡಿಸಲಾಗುತ್ತಿದೆ. 5,000 ಎಲ್ ಕೆಜಿ, ಯುಕೆಜಿ ಶಾಲೆ ತೆರೆಯಲಾಗುವುದು. 25 ಸಾವಿರ ಮಕ್ಕಳಿಗೆ ಉಚಿತವಾಗಿ ನೀಟ್, ಜೆಇಇ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕರಾದ ಎಂ.ಆರ್.ಪಾಟೀಲ್, ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನುಮಕ್ಕನವರ, ಚಲನಚಿತ್ರ ನಟಿ ಸಪ್ತಮಿ ಗೌಡ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಯೂಟರ್ ಲ್ಯಾಬ್ ಅನ್ನು ಗಣ್ಯರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಡಿಡಿಪಿಐ ಎಸ್.ಎಸ್.ಕೆಳದಿಮಠ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಛಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷ ರವಿ ಹುಲ್ಲಂಬಿ, ಸದಸ್ಯರು, ಪಿಡಿಒ ಚಂದ್ರಶೇಖರ ಪೂಜಾರಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ