ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ ಪರಮಾವಧಿ.ಗುತ್ತಿಗೆದಾರರನ್ನು ಎಲ್ಲಿಯೂ ನಾನು ಭೇಟಿಯಾಗುವಂತೆ ಹೇಳಿಲ್ಲ.ಅವರಿಂದ ಒಂದು ಕಪ್ ಚಹಾ ಅಲ್ಲ ನೀರನ್ನೂ ಕುಡಿದಿಲ್ಲ.ಇಂತಹ ಆರೋಪ ಮಾಡಿರುವವರು ಅದನ್ನು ಸಾಕ್ಷಿ ಸಮೇತ ಸಾಬೀತು ಮಾಡಬೇಕು.ಸಾಬೀತು ಮಾಡಿದರೆ ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ.ಇಲ್ಲದಿದ್ದಲ್ಲಿ ನೀವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಶಾಸಕ ನಾಡಗೌಡರು ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೆಸರು ಹೇಳದೇ ಸವಾಲು ಹಾಕಿದರು.
ಕೆಲವರು ಯಾರ ಬೆಳವಣಿಗೆಯನ್ನು ಸಹಿಸುವುದಿಲ್ಲ.ಒಳ್ಳೆಯವರನ್ನು ಗುಣಗಾಣವನ್ನು ಮಾಡುವುದಿಲ್ಲ.ಅವರದ್ದು ಸ್ಯಾಡಿಸ್ಟ ಮನೋಭಾವದವರು ಇದ್ದಾರೆ.ಇವರನ್ನು ಯಾಕೆ ಕಾರ್ಯಕ್ರಮಗಳಿಗೆ ಜನ ಕರೆಸುತ್ತಾರೆಯೋ ಗೊತ್ತಿಲ್ಲ.ದೊಡ್ಡವರನ್ನು ಬಯ್ಯುವುದಕ್ಕೆ ಕರೆಸುತ್ತಾರೆಯೋ ಹೇಗೆ ? ಇನ್ನು ಮುಂದೆ ಅಂತಹ ಸಮಾರಂಭಕ್ಕೆ ನಾನು ಹೋಗುವುದಿಲ್ಲ.ಅಂತಹವರನ್ನು ಕರೆದುಕೊಂಡು ಕಾರ್ಯಕ್ರಮ ಮಾಡಿ ಎಂದು ಹೇಳಿದರು.
ಕೆಲಸ ಬಾಕಿ ಇದೆ ಎನ್ನುವ ಅವರು, ಅವರ ಮಾವನೇ ಆ ಕೆಲಸ ಮಾಡುತ್ತಿದ್ದಾರೆ.ಅದನ್ನು ಪರಿಗರಿಸುವುದಕ್ಕೆ ಏನು ಪ್ರಯತ್ನ ಮಾಡಿದ್ದಾರೆ.ಗುತ್ತಿಗೆದಾರರ ಬಗ್ಗೆ ಗೌರವ ಇದೆ.ಆದರೆ ನೀವು ಚುನಾವಣೆ ಇದ್ದಾಗ ೧೫ ದಿನ ಮುಂಚೆ ಬಂದು ನಮ್ಮನ್ನು ಸೇರಿಕೊಂಡಿದ್ದಿರಿ.ಆದರೆ ಉದ್ಧಟತಬದ ಮಾತು ಸರಿಯಲ್ಲ.ಸಿನೇಮಾದಲ್ಲಿ ಹಿರೋಯಿನ್ ಜಗ್ಗಾಡುವಾಗ ಜನ ಸೀಟಿ ಹೊಡೆದು ಚಪ್ಪಾಳೆ ತಟ್ಟುತ್ತಾರಲ್ಲ.ಆ ಮನಸ್ಥಿತಿ ಜನ ಇವರು ಎಂದು ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೆಸರು ಹೇಳದೇ ಟೀಕಿಸಿದರು.
‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ
‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ
Latest News
S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಓಗಳು,ಮೇಲ್ವಿಚಾರಕರು,ಬಿಎಲ್ಎಗಳ ಹಾಗೂ ಮತದಾರರ
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು
ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ
ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ
ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ
ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ
ಮುದ್ದೇಬಿಹಾಳ : ರೆಗ್ಯೂಲೆಟರ್ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ







