ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮಾಹಾಂತ ಶ್ರೀಗಳ ಶ್ರಮ ಅಪಾರ: ಗಚ್ಚಿನಮಠ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮಾಹಾಂತ ಶ್ರೀಗಳ ಶ್ರಮ ಅಪಾರ: ಗಚ್ಚಿನಮಠ

ಹುನಗುಂದ: ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠದ ಹೇಳಿದರು.

ಪಟ್ಟಣ ವಿಜಯ ಮಹಾಂತೇಶ ವೃತ್ತದಲ್ಲಿನ ಗುರವಾರ ವಿಜಯ ಮಹಾಂತೇಶ್ವರ ಮೂರ್ತಿಗೆ ಪುಷ್ಪಾರ್ಪಣೆ ನೆರವೇರಿಸಿ ಪೂಜೆ ಸಲ್ಲಿಸಿ ಮಾತನಾಡಿದ ಅವರು ಶ್ರೀಗಳು ತಮ್ಮ ಜೋಳಿಗೆಯನ್ನು ಹಿಡಿದು ಗ್ರಾಮ, ನಗರ ಸೇರಿದಂತೆ ರಾಜ್ಯಾದ್ಯಂತ ಸಂಚಾರ ನಡೆಸಿದ್ದರು. ಯುವಕರು ಸಾರ್ವಜನಿಕರು ತಮ್ಮ ದುಶ್ಚಟಗಳನ್ನು ಜೋಳಿಗೆಗೆ ಹಾಕಿ ಮುಕ್ತಿ ಪಡೆದಿದ್ದರು. ಶ್ರಮದಿಂದ ಸಾವಿರಾರು ಜನ ಮದ್ಯಪಾನ ತ್ಯಜಿಸಿದ್ದರು, ಸಮಾಜ ಸೇವೆ ಕಂಡ ರಾಜ್ಯ ಸರಕಾರ ಅವರ ಜನ್ಮದಿನವಾದ ಆ.೧ ರಂದು ವ್ಯಸನಮುಕ್ತ ದಿನವಾಗಿ ಘೋಷಿಸಿದ್ದು ಶ್ಲಾಘನೀಯ ಎಂದು ಹೇಳಿದರು.


ಮಹಾಂತೇಶ ತೆಗ್ಗಿನಮಠ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ನಾರಾಯಣ ಕುಡಕುಂಟಿ,ರಾಮನಗೌಡ ಬೆಳ್ಳಿಹಾಳ, ಮಹಾಂತೇಶ ಚಿತ್ತವಾಡಗಿ, ಮಲ್ಲಣ್ಣ ಹೂಗಾರ, ಮಹಾಲಿಂಗಯ್ಯ ಹಿರೇಮಠ ಸೇರಿದಂತೆ ಇತರರು ಇದ್ದರು.

Latest News

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ:                          ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಮುದ್ದೇಬಿಹಾಳ : ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು ಅಂತಹ ಸನ್ಮಾನಗಳು ಸಮಾಜದಲ್ಲಿ ಗೌರವ ಹೆಚ್ಚಿಸುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಧಕರ ಸನ್ಮಾನ,ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ.ಇನ್ನು ಕೆಲವರು ಸನ್ಮಾನಕ್ಕೆ ಇಂತಹದ್ದೇ ವಸ್ತು,ಸಾಮಗ್ರಿ ಬೇಕೆಂದು ಬೇಡಿಕೆ ಇರಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ.ಆದರೆ ಸಮಾಜದಲ್ಲಿ ಎಲ್ಲರ ಮಧ್ಯೆ ನಡೆಯುವ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ