Implementation of a revolutionary scheme by the government for the welfare of unorganized workers

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ಹುಬ್ಬಳ್ಳಿಯ ಬೆಂಗೇರಿಯ ಸಂತೆ ಮೈದಾನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಮತ್ತು ಸ್ಮಾರ್ಟ್‌ ಕಾರ್ಡ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸಲು ನಮ್ಮ ಇಲಾಖೆ ಅಧಿಕಾರಿಗಳು ಸಾಕಷ್ಟು ಶ್ರಮವಹಿಸಿದ್ದಾರೆ. ನಾನು ಇಲಾಖೆಯ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ ಸಾಕಷ್ಟು ಸವಾಲುಗಳು ಇದ್ದವು. ಈಗಲೂ ಇವೆ. ಆದರೆ ಕಾರ್ಮಿಕರ ಕಲ್ಯಾಣಕ್ಕಾಗಿ ಏನಾದರೂ ಮಾಡಲೇ ಬೇಕು ಎಂಬ ಉದ್ದೇಶದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಅಸಂಘಟಿತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಸಾರಿಗೆ ಮಂಡಳಿ ರಚನೆ ಮಾಡಿದ್ದೇವೆ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಸಹಕಾರ ಹಾಗೂ ಬೆಂಬಲದಿಂದ ಈ ಮಂಡಳಿ ರಚನೆ ಸಾಧ್ಯವಾಯಿತು. ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ರೀತಿಯಿಂದ ಸಹಕಾರ ನೀಡಿದರು. ಹೊಸ ವಾಹನಗಳನ್ನು ಖರೀದಿ ಮಾಡಿದಾಗ ಸಂಗ್ರಹಿಸುವು ಕರದಿಂದ ಈ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗೆ ನಿಧಿ ಸ್ಥಾಪಿಸಿ ಜೀವ ವಿಮೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುವುದು. ಇಂತಹ ಒಂದು ಮಂಡಳಿಯನ್ನು ರಚನೆ ಮಾಡಿರುವುದು ಇಡೀ ದೇಶದಲ್ಲೇ ನಾವು ಎಂಬುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.

ಅಸಂಘಟಿತ ವಲಯದಲ್ಲಿ ಕೋಟ್ಯಂತರ ಕಾರ್ಮಿಕರು ಕೆಲಸ ಮಾಡುತ್ತಾ ಇದ್ದಾರೆ. ಅವರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಲು ಹಣಕಾಸಿನ ಅಗತ್ಯವಿದೆ. ಅದಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲೆ ವಿಧಿಸುತ್ತಿರುವ ಕರದಲ್ಲಿ ಪಾಲು ಕೊಡುವಂತೆ ಮಾನ್ಯ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ. ಹಾಗಾದರೆ ಎರಡು ಸಾವಿರ ಕೋಟಿ ಹಣ ಮಂಡಳಿಗೆ ಬರಲಿದೆ. ಇದರೊಂದಿಗೆ ಜಿಎಸ್‌ಟಿಯಲ್ಲಿ ಒಂದಂಶ ಕೊಡಲು ಕೇಳಿದ್ದೇವೆ. ಕಾರ್ಪೋರೇಟ್‌ ತೆರಿಗೆಯಲ್ಲಿ ಪಾಲು ಕೇಳಿದ್ದೇವೆ. ಇದು ಸಿಕ್ಕರೆ ಸಾವಿರಾರು ಕೋಟಿ ಹಣ ಸಿಗಲಿದೆ. ಆ ಹಣದಿಂದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಸೌಲಭ್ಯ ಕೊಡಲು ಅನುಕೂಲವಾಗಲಿದೆ. ಇದೆಲ್ಲ ಸಾಕಾರವಾದರೆ ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ಕರ್ನಾಟಕದಲ್ಲಿ ಮೊದಲು ಎಂಬುದು ಹೆಮ್ಮೆಯ ವಿಷಯ ಎಂದರು.

ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣಕ್ಕಾಗಿ ಕಾಯ್ದೆ ಜಾರಿ ಮಾಡಿದ್ದೇವೆ. ಈ ಕ್ಷೇತ್ರದಲ್ಲೂ ಅಸಂಖ್ಯಾತ ಕಾರ್ಮಿಕರು ಕೆಲಸ ಮಾಡುತ್ತಾ ಇದ್ದಾರೆ. ಸಿನಿಮಾ ಟಿಕೆಟ್‌ ಮೇಲೆ ಸಣ್ಣ ಮೊತ್ತದ ಕರ ಹಾಕಿ ಅದಕ್ಕೆ ಸರ್ಕಾರದ ಹಣವೂ ನೀಡಿ ನಿಧಿ ಸ್ಥಾಪಿಸಿ ಈ ಕ್ಷೇತ್ರದ ಜನರಿಗಾಗಿ ಸೌಲಭ್ಯ ಒದಗಿಸಲಾಗುವುದು ಎಂದರು.

ಇನ್ನು ಗಿಗ್‌ ಕಾರ್ಮಿಕರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಕ್ರಾಂತಿಕಾರಕ ಕ್ರಮಗಳನ್ನು ಜಾರಿ ಮಾಡಿದೆ. ಇದು ರಾಹುಲ್‌ ಗಾಂಧಿ ಅವರ ಕನಸು. ಭಾರತ್‌ ಜೋಡೊ ಯಾತ್ರೆ ವೇಳೆ ಗಿಗ್‌ ಕಾರ್ಮಿಕರಿಗೆ ಸೌಲಭ್ಯಕ್ಕಾಗಿ ಮನವಿ ಮಾಡಿದ್ದರು. ರಾಜಸ್ಥಾನಕ್ಕಿಂತ ಒಳ್ಳೆಯ ಮಸೂದೆ ಜಾರಿ ಮಾಡಿದ್ದೇವೆ. ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಸಂಬಂಧ ಸಾಕಷ್ಟು ಸಭೆ ಮಾಡಿದ್ದೇನೆ. ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವವರು ಮತ್ತು ಅವರ ಅವಲಂಬಿತರಿಗೆ ಜೀವವಿಮೆ ಸೇರಿದಂತೆ ಹಲವಾರು ಸೌಲಭ್ಯಗಳು ಸಿಗಲಿವೆ ಎಂದರು.

ಇನ್ನು ಕಡ್ಡಾಯ ಉಪಧನ (ಗ್ರ್ಯಾಚುಯಿಟಿ) ಕಾಯ್ದೆ, ಅಂಬೇಡ್ಕರ್‌ ಸಹಾಯ ಹಸ್ತ, ಆಶಾದೀಪ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಸದ್ಯದಲ್ಲೇ ಮನೆಕೆಲಸದವರಿಗೆ ಅನುಕೂಲವಾಗುವ ಬಿಲ್‌ ತರಲು ಸಿದ್ಧತೆ ನಡೆದಿದೆ ಎಂದರು.

ನಮ್ಮ ಸರ್ಕಾರದ ಪಂಚ ಗ್ಯಾರಂಟಿಗಳು ಕೋಟ್ಯಂತರ ಕುಟುಂಬಗಳನ್ನು ತಲುಪುತ್ತಾ ಇವೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಹಲವಾರು ಕಾರ್ಯಕ್ರಮಗಳು ಜಾರಿಯಲ್ಲಿವೆ ಎಂದು ವಿವರಿಸಿದರು.

ಸಮಾರಂಭದಲ್ಲಿ ಶಾಸಕರಾದ ಮಹೇಶ್‌ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಡಾ ಅಧ್ಯಕ್ಷ ಶಾಕೀರ್‌ ಸನದಿ, ಮಾಜಿ ಸಚಿವ ಹಿಂಡಸಗೇರಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪಿರ್‌ ಖಾದ್ರಿ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್‌ ಮತ್ತಿತರರು ಉಪಸ್ಥಿತರಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ