Implementation of ERT; Recognition of the opinion of the people's representatives and the public

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾಡ್‌ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ) ಸೌಲಭ್ಯ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು, ಉತ್ತಮ ಯೋಜನಾ ವರದಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಕಾರಿಡಾರ್‌ನಲ್ಲಿ ಇ.ಆರ್.ಟಿ. ಸಾರಿಗೆ ವ್ಯವಸ್ಥೆ ಕುರಿತು ಸಾರ್ವಜನಿಕರು ಮತ್ತು ಭಾಗೀದಾರರ ಸಭೆಯಲ್ಲಿ ಮಾತನಾಡಿದರು.

ಹುಬ್ಬಳ್ಳಿ- ಧಾರವಾಡ ಕಾರಿಡಾರ್‌ ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ.) ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಮತ್ತು ಖಾಸಗಿ (ಪಿಪಿಪಿ ಮಾಡಲ್) ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಜಾರಿಗೊಳಿಸಲು ವಿಸೃತ ಯೋಜನಾ ವರದಿ (ಡಿಪಿಆರ್)ಯನ್ನು ಸಿದ್ಧಗೊಳ್ಳಿಸಲಾಗುತ್ತಿದೆ. ಸರ್ಕಾರವು 3 ತಿಂಗಳ ಕಾಲಾವಕಾಶ ನೀಡಿದ್ದು, ಈಗಾಗಲೇ ಒಂದು ತಿಂಗಳ ಅಧ್ಯಯನ ನಡೆಸಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಂತಿಮ ವಿಸೃತ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಂಸ್ಥೆಯು ಸಲ್ಲಿಸಲಿದೆ ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ವಿವಿಧ ಪ್ರತಿನಿಧಿಗಳು, ಸಾರ್ವಜನಿಕರು ಮಾತನಾಡಿ, ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳ ಜೊತೆಗೆ ಮನವಿಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಮ್., ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್., ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು