Implementation of ERT; Recognition of the opinion of the people's representatives and the public

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾಡ್‌ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ) ಸೌಲಭ್ಯ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು, ಉತ್ತಮ ಯೋಜನಾ ವರದಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಕಾರಿಡಾರ್‌ನಲ್ಲಿ ಇ.ಆರ್.ಟಿ. ಸಾರಿಗೆ ವ್ಯವಸ್ಥೆ ಕುರಿತು ಸಾರ್ವಜನಿಕರು ಮತ್ತು ಭಾಗೀದಾರರ ಸಭೆಯಲ್ಲಿ ಮಾತನಾಡಿದರು.

ಹುಬ್ಬಳ್ಳಿ- ಧಾರವಾಡ ಕಾರಿಡಾರ್‌ ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ.) ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಮತ್ತು ಖಾಸಗಿ (ಪಿಪಿಪಿ ಮಾಡಲ್) ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಜಾರಿಗೊಳಿಸಲು ವಿಸೃತ ಯೋಜನಾ ವರದಿ (ಡಿಪಿಆರ್)ಯನ್ನು ಸಿದ್ಧಗೊಳ್ಳಿಸಲಾಗುತ್ತಿದೆ. ಸರ್ಕಾರವು 3 ತಿಂಗಳ ಕಾಲಾವಕಾಶ ನೀಡಿದ್ದು, ಈಗಾಗಲೇ ಒಂದು ತಿಂಗಳ ಅಧ್ಯಯನ ನಡೆಸಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಂತಿಮ ವಿಸೃತ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಂಸ್ಥೆಯು ಸಲ್ಲಿಸಲಿದೆ ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ವಿವಿಧ ಪ್ರತಿನಿಧಿಗಳು, ಸಾರ್ವಜನಿಕರು ಮಾತನಾಡಿ, ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳ ಜೊತೆಗೆ ಮನವಿಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಮ್., ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್., ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ