ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ