ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.