ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ