ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ