ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,