ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

Ad
Ad

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.

Ad
Ad


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮುದ್ದೇಬಿಹಾಳ : ತಮ್ಮ ಪುತ್ರ ಕಿರಣ ಮದರಿ ಅವರ ಕಲ್ಯಾಣ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮೇ.18 ರಂದು ಆಯೋಜಿಸಲಾಗಿದ್ದು ಆಸಕ್ತ ವಧು ವರರು ತಮ್ಮ ಹೆಸರುಗಳನ್ನು ನೋಂದಾಯಿಸಲು ಕಲ್ಯಾಣ ಮಹೋತ್ಸವ ಸಮೀತಿ ಸಂಚಾಲಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್. ಮದರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪ್ರಥಮ ದರ್ಜೆ ಗುತ್ತಿಗೆದಾರರೂ ಆಗಿರುವ ಎಂ. ಎನ್. ಮದರಿ ಅವರು, ಉಳ್ಳವರ ಮದುವೆಗಳು ದುಂದುವೆಚ್ಚದಿಂದ

ನಾಗರಬೆಟ್ಟ : ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.99.46 ಫಲಿತಾಂಶ

ನಾಗರಬೆಟ್ಟ : ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.99.46 ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಗುಡ್ಡದ ಬಳಿ ಇರುವ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.99.46 ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ 1120 ವಿದ್ಯಾರ್ಥಿಗಳಲ್ಲಿ 1114 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 658 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಪಿಸಿಎಂಬಿ ವಿಭಾಗದಲ್ಲಿ 501 ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ ಅಂಕ ಪಡೆದಿದ್ದಾರೆ. ವಜ್ರಾ ಆಚಾರಿ ಶೇ.97.5 ಪ್ರಥಮ, ಸಾನಿಕಾ ಘೂಳಣ್ಣವರ ಶೇ.97.16 ದ್ವಿತೀಯ, ಸಂಪತ್ತಕುಮಾರ ಹುಗ್ಗಿ, ಸ್ನೇಹಾ