ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ