ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

Ad
Ad

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.

Ad
Ad


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ