Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ:                 ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಇಬ್ಬರೂ ಬಹಳ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡರು. ಈ ಇಬ್ಬರೂ ಎಲ್ಲಿಯೂ ನಿಶ್ಚಿತಾರ್ಥದ ಫೋಟೋ ಗಳನ್ನು ಹಂಚಿಕೊಂಡಿಲ್ಲ, ವಿಜಯ್ ಮತ್ತು ರಶ್ಮಿಕಾ. ನಿಶ್ಚಿತಾರ್ಥದ ನಂತರ, ಅವರು ತಮ್ಮ ಕೆಲಸಗಳಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ