Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ