Accident news Accident board on road

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!

ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ ಚಾಲಕ. ಕೊಲೆ ಸಂಬಂಧ ಮಧ್ಯಪ್ರದೇಶ ಮೂಲದ ಸಹದೇವ ಆರ್ಯ ಅಲಿಯಾಸ್ ಬಾಬು(29 ವರ್ಷ), ಸುನೀಲ್ ನಾವೇ(20 ವರ್ಷ), ದಿನೇಶ್ (25 ವರ್ಷ) ಮತ್ತು ಅಲ್ವೇಶ್ ಪಾನ್ಸೆ(20 ವರ್ಷ) ಹಾಗೂ ಸಂಜಯ್ ಕಾಜೆ(21 ವರ್ಷ) ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

Join Our Telegram: https://t.me/dcgkannada

ಘಟನೆಯ ವಿವರ: ಕೊಲೆಯಾದ ಸುರೇಶ್ ಮತ್ತು ಸಂಬಂಧಿ ರವಿಚಂದ್ರನ್ 3 ತಿಂಗಳಿಂದ ಅಮೃತ್‌ ಬೋರ್‌ವೆಲ್‌ ಕಲ್ಕಿ ಎಂಟರ್‌ಪ್ರೈಸಸ್‌ನಲ್ಲಿ ಬೋರ್ ವೆಲ್ ಲಾರಿ ಚಾಲಕ ಹಾಗೂ ಡ್ರಿಲ್ಲಿಂಗ್ ಆಪರೇಟ‌ರ್ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಸಿಂಗಸಂದ್ರದ ಎಇಸಿಎಲ್‌ ಲೇಔಟ್‌ನ ನಿವೇಶನವೊಂದರಲ್ಲಿ ಬೋರ್ ವೆಲ್ ಕೊರೆಯಲು ಸುರೇಶ್, ರವಿಚಂದ್ರನ್ ಹಾಗೂ ಆರೋಪಿಗಳು ಬಂದಿದ್ದಾರೆ.

ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಯುವ ಕೆಲಸ ಸ್ಥಗಿತಗೊಳಿಸಿ, ಸೋಮವಾರ ಕೆಲಸ ಮುಂದುವರೆಸಲು ತೀರ್ಮಾನಿಸಿದ್ದಾರೆ. ನಿವೇಶನದಲ್ಲಿದ್ದ ಶೆಡ್‌ನಲ್ಲಿ ರಾತ್ರಿ ಉಳಿದುಕೊಂಡಿದ್ದಾರೆ.

ಈ ವೇಳೆ ಆರೋಪಿ ಸಹದೇವ ಅಡುಗೆ ಮಾಡಲು ಆರಂಭಿಸಿದ್ದಾನೆ. ಆಗ ಬೋರ್‌ವೆಲ್‌ ಲಾರಿ ಚಾಲಕ (Lorry driver murder) ಸುರೇಶ್, ನಿನಗೆ ಸರಿಯಾಗಿ ಕೆಲಸ ಮಾಡಲೂ ಬರುವುದಿಲ್ಲ, ಅಡುಗೆ ಮಾಡಲೂ ಬರುವುದಿಲ್ಲ ಎಂದು ತಮಿಳಿನಲ್ಲಿ ಸಹದೇವನನ್ನು ನಿಂದಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

ಬಳಿಕ ಇತರೆ ಕಾರ್ಮಿಕರು ಜಗಳ ಬಿಡಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದಾರೆ. ಬಳಿಕ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡಿ ಶೆಡ್‌ನಲ್ಲಿ ನಿದ್ದೆಗೆ ಜಾರಿದ್ದಾರೆ.

ಇದನ್ನೂ‌ ಓದಿ: Murder case: ಶೆಡ್‌ನಲ್ಲಿ ನಡೀತು ಮತ್ತೊಂದು ಭೀಕರ ಹತ್ಯೆ..! ಇಲ್ಲಿ ಸ್ನೇಹಿತನೇ ಕೊಲೆಗಾರ

ರಾಡ್‌ನಿಂದ ತಲೆಗೆ ಹಲ್ಲೆಗೈದು ಕೊಲೆ: ಲಾರಿ ಚಾಲಕ ಸುರೇಶ್ ಗಾಢ ನಿದ್ದೆಯಲ್ಲಿದ್ದಾಗ ರಾತ್ರಿ ಸುಮಾರು 11.30ಕ್ಕೆ ಕಾರ್ಮಿಕರಾದ ಸಹದೇವ ಹಾಗೂ ಇತರರು ಕಬ್ಬಿಣದ ರಾಡ್‌ ಹಾಗೂ ಸುತ್ತಿಗೆಯಿಂದ ಸುರೇಶ್ ತಲೆ ಹಾಗೂ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುರೇಶ್ ಕೊಲೆ ವಿಚಾರ ಗೊತ್ತಾಗಿ ಸಂಬಂಧಿ ರವಿಚಂದ್ರನ್ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಹತ್ಯೆ ಬಳಿಕ ತವರು ರಾಜ್ಯಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ