ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬುಧವಾರ ಬೆಳಗ್ಗೆ ಮದುವೆಯಾದ ನವಜೋಡಿ, ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ಕೆಜಿಎಫ್ ನಲ್ಲಿ ವಧು ಸಾವನ್ನಪ್ಪಿದ್ದ ಬೆನ್ನಲ್ಲೆ, ಇಂದು ಮದುಮಗ ಕೂಡ ಮರಣ ಹೊಂದಿದ್ದಾನೆ.

ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದ್ದು, ಆಂಧ್ರದ ಬೆನಪಲ್ಲಿ ಗ್ರಾಮದ ಲಿಖಿತಾ ಶ್ರೀ ಮೃತಪಟ್ಟಿದ್ದಳು. ಘಟನೆಯಲಗಲಿ ಚಂಬರಸನಹಳ್ಳಿಯ ನವೀನ್ ಸ್ಥಿತಿ ಗಂಭೀರವಾಗಿತ್ತು.

ಬುಧವಾರ ಬೆಳಗ್ಗೆ 11.30ಕ್ಕೆ ಮದುವೆ ನಡೆದಿದ್ದು ಕೆಲವೇ ಗಂಟೆಗಳಲ್ಲಿ ಗಂಡ ಹಂಡತಿ ಜಗಳ ಆಡಿಕೊಂಡಿದ್ದಾರೆ. ನಂತರ ರೂಂ ಸೇರಿದ ದಂಪತಿ ಹೊಡೆದಾಡಿಕೊಂಡಿದ್ದು ಇಬ್ಬರಿಗೂ ಗಂಭೀರ ಗಾಯಗಳಾಗಿದ್ದನ್ನು ಗಮನಿಸಿದ ನೆಂಟರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲಿಖಿತ ಸಂಜೆ ಸಾವನಪ್ಪಿದರೆ. ನವೀನ್ ಇಂದು ಸಾವನಪ್ಪಿದ್ದಾನೆ.

ಇದನ್ನು ಓದಿ: ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಒಲ್ಲದ ಮದುವೆ- ಜಗಳದ ಗೊಡವೆ: ಪರಸ್ಪರ ಸಂಬಂಧಿಕರಾಗಿದ್ದ ಲಿಖಿತ ಶ್ರೀ ಮತ್ತು ನವೀನ್ ಮದುವೆ 4 ತಿಂಗಳ ಹಿಂದೆ ನಿಶ್ಚಯ ಆಗಿತ್ತಾದರೂ ನಂತರ ಕ್ಯಾನ್ಸಲ್ ಸಹಾ ಆಗಿತ್ತು. ಆದರೆ ಸಂಬಂಧಿಕರು, ಸ್ನೇಹಿತರ ಮಧ್ಯಸ್ತಿಕೆಯಿಂದಾಗಿ ಪುನಃ ಸಂಧಾನ ನಡೆದು ಕಳೆದವಾರ ಮದುವೆ ದಿನಾಂಕ ನಿಗದಿ ಮಾಡಲಾಗಿತ್ತು.

ಮದುವೆ ಶಾಸ್ತ್ರದಲ್ಲಿ ಲಿಖಿತ ಲವಲವಿಕೆಯಿಂದ ಇದ್ದರೂ ನವೀನ್ ಅನ್ಯಮನಸ್ಕನಾಗಿ ಚಿಂತಾ ಕ್ರಾಂತನಾಗಿದ್ದನಾದರೂ ಎಲ್ಲವೂ ಸರಿ ಹೋಗುತ್ತದೆ ಎಂದು ನೆಂಟರು ಅಂದುಕೊಂಡಿದ್ದರು. ಆದರೆ ಮಧ್ಯಾಹ್ನ ಊಟ ಮಾಡುವಾಗಲೇ ಆರಂಭವಾದ ಗಲಾಟೆ ಸಂಜೆ 06 ಗಂಟೆಗೆ ಕೊಲೆಯಲ್ಲಿ ಅಂತ್ಯ ಕಂಡಿದೆ.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ