ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!

ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬುಧವಾರ ಬೆಳಗ್ಗೆ ಮದುವೆಯಾದ ನವಜೋಡಿ, ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ಕೆಜಿಎಫ್ ನಲ್ಲಿ ವಧು ಸಾವನ್ನಪ್ಪಿದ್ದ ಬೆನ್ನಲ್ಲೆ, ಇಂದು ಮದುಮಗ ಕೂಡ ಮರಣ ಹೊಂದಿದ್ದಾನೆ.

ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದ್ದು, ಆಂಧ್ರದ ಬೆನಪಲ್ಲಿ ಗ್ರಾಮದ ಲಿಖಿತಾ ಶ್ರೀ ಮೃತಪಟ್ಟಿದ್ದಳು. ಘಟನೆಯಲಗಲಿ ಚಂಬರಸನಹಳ್ಳಿಯ ನವೀನ್ ಸ್ಥಿತಿ ಗಂಭೀರವಾಗಿತ್ತು.

ಬುಧವಾರ ಬೆಳಗ್ಗೆ 11.30ಕ್ಕೆ ಮದುವೆ ನಡೆದಿದ್ದು ಕೆಲವೇ ಗಂಟೆಗಳಲ್ಲಿ ಗಂಡ ಹಂಡತಿ ಜಗಳ ಆಡಿಕೊಂಡಿದ್ದಾರೆ. ನಂತರ ರೂಂ ಸೇರಿದ ದಂಪತಿ ಹೊಡೆದಾಡಿಕೊಂಡಿದ್ದು ಇಬ್ಬರಿಗೂ ಗಂಭೀರ ಗಾಯಗಳಾಗಿದ್ದನ್ನು ಗಮನಿಸಿದ ನೆಂಟರು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲಿಖಿತ ಸಂಜೆ ಸಾವನಪ್ಪಿದರೆ. ನವೀನ್ ಇಂದು ಸಾವನಪ್ಪಿದ್ದಾನೆ.

ಇದನ್ನು ಓದಿ: ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಒಲ್ಲದ ಮದುವೆ- ಜಗಳದ ಗೊಡವೆ: ಪರಸ್ಪರ ಸಂಬಂಧಿಕರಾಗಿದ್ದ ಲಿಖಿತ ಶ್ರೀ ಮತ್ತು ನವೀನ್ ಮದುವೆ 4 ತಿಂಗಳ ಹಿಂದೆ ನಿಶ್ಚಯ ಆಗಿತ್ತಾದರೂ ನಂತರ ಕ್ಯಾನ್ಸಲ್ ಸಹಾ ಆಗಿತ್ತು. ಆದರೆ ಸಂಬಂಧಿಕರು, ಸ್ನೇಹಿತರ ಮಧ್ಯಸ್ತಿಕೆಯಿಂದಾಗಿ ಪುನಃ ಸಂಧಾನ ನಡೆದು ಕಳೆದವಾರ ಮದುವೆ ದಿನಾಂಕ ನಿಗದಿ ಮಾಡಲಾಗಿತ್ತು.

ಮದುವೆ ಶಾಸ್ತ್ರದಲ್ಲಿ ಲಿಖಿತ ಲವಲವಿಕೆಯಿಂದ ಇದ್ದರೂ ನವೀನ್ ಅನ್ಯಮನಸ್ಕನಾಗಿ ಚಿಂತಾ ಕ್ರಾಂತನಾಗಿದ್ದನಾದರೂ ಎಲ್ಲವೂ ಸರಿ ಹೋಗುತ್ತದೆ ಎಂದು ನೆಂಟರು ಅಂದುಕೊಂಡಿದ್ದರು. ಆದರೆ ಮಧ್ಯಾಹ್ನ ಊಟ ಮಾಡುವಾಗಲೇ ಆರಂಭವಾದ ಗಲಾಟೆ ಸಂಜೆ 06 ಗಂಟೆಗೆ ಕೊಲೆಯಲ್ಲಿ ಅಂತ್ಯ ಕಂಡಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ