ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)

ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)


ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ತಾಂಡಾದಲ್ಲಿ ( Koluru tanda) ಶತಮಾನಗಳಿಂದ ವಾಸಿಸುತ್ತಿರುವ ನಿವಾಸಿಗಳಿಗೆ ವಾಸಿಸುತ್ತಿರುವ ಜಾಗೆಯ ಕುರಿತು ಗೊಂದಲ ಸೃಷ್ಟಿಸಿ ಅದರ ದುರ್ಲಾಭ ಪಡೆದುಕೊಳ್ಳಲು ಹಾಲಿ, ಮಾಜಿ ಶಾಸಕರ ಹೆಸರುಗಳನ್ನು ಬಳಸಿಕೊಂಡು ಕೆಲವು ಪುಢಾರಿಗಳು ವಸೂಲಿ ದಂಧೆಗೆ ಇಳಿದಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಆಗ್ರಹಿಸಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ತಾಂಡಾ ನಿವಾಸಿಗಳೊಂದಿಗೆ ಆಗಮಿಸಿದ್ದ ಅವರು ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ತಾಲ್ಲೂಕಿನ ಕೋಳೂರು ತಾಂಡಾ Koluru tanda) ನಿವಾಸಿಗಳು ತಾಂಡಾದ ಸರ್ವೆ ನಂ.167//3ಬ, 167//2, 167//1 , 169//* ರಲ್ಲಿನ ಮಾಲೀಕರುಗಳಿಗೆ ತಮ್ಮ ಸ್ವಂತ ಹಣವನ್ನು ಕೊಟ್ಟು ಅವತ್ತಿನ ಕಾಲದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈಚೇಗೆ ಸರ್ಕಾರದ ಸುತ್ತೋಲೆಯಂತೆ ನಮ್ಮ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದರ ದುರುಪಯೋಗವನ್ನು ಮೂಲ ಮಾಲೀಕರೂ ಹಾಗೂ ಮಧ್ಯವರ್ತಿಗಳು ಪಡೆದುಕೊಂಡು ಇಲ್ಲಿನ ನಿವಾಸಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಜೊತೆಗೆ ಇರುವ ಕೆಲವು ಪುಢಾರಿಗಳು ಈ ರೀತಿ ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದು ಜನಪ್ರತಿನಿಧಿಗಳ ಮುಖಕ್ಕೆ ಕಪ್ಪು ಮಸಿ ಬಳಿಯುವ ಕುತಂತ್ರವೂ ನಡೆದಿದೆ. ಇದಕ್ಕೆ ಹಾಲಿ, ಮಾಜಿ ಶಾಸಕರು ಆಸ್ಪದ ಕೊಡದೇ ಅಂತವರಿಗೆ ತಿಳಿವಳಿಕೆ ಹೇಳಬೇಕು ಎಂದು ಮನವಿ ಮಾಡಿದರು.

ಸರ್ಕಾರಕ್ಕೆ ಪುಕ್ಕಟೆಯಾಗಿ ಜಮೀನು ಕೊಟ್ಟಿದ್ದೇವೆ.ಅದಕ್ಕಾಗಿ ನಮಗೆ ಪರಿಹಾರ ಕೊಡಬೇಕು ಎಂದು ವಿನಾಕಾರಣ ಕೆಲವು ಪಟ್ಟಭದ್ರರು ಸರಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.ಅಧಿಕಾರಿಗಳಿಗೆ ಧಮಕಿ ಹಾಕಿ ತಮಗೆ ಸಂಬಂಧಪಡದ ಜಾಗೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸದರಿ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಡವರಿಗೆ ಅನ್ಯಾಯ ಆಗದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಇಂತಹ ದುರ್ಮಾರ್ಗದಿಂದ ಬಡವರಿಗೆ ತೊಂದರೆ ಕೊಡುವ ಕೆಲಸ ಮುಂದುವರೆದರೆ, ನಮ್ಮ ತಾಂಡಾವನ್ನು ಕಂದಾಯ ಗ್ರಾಮ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಮೂಲ ಮಾಲೀಕರಿಗೆ ಹಣ ಕೊಟ್ಟು ಜಮೀನು ಖರೀದಿ ಮಾಡಿದ್ದು ಅವರಿಗೆ ಯಾವುದೇ ರೀತಿಯ ಪರಿಹಾರವನ್ನು ನೀಡಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಿದರು.

ತಾಂಡಾದ ಪ್ರಮುಖರಾದ ಶಾಂತಾರಾಮ ಮೇಲ್ಮನಿ, ರಾಮಸ್ವಾಮಿ ಸೀತಿಮನಿ, ಪ್ರತಾಪ ಸೀತಿಮನಿ, ತುಳಜಾರಾಮ ಚವ್ಹಾಣ, ಸಯಭಾಷ ದಿಂಡೂರ, ಮುತ್ತು ಚವ್ಹಾಣ, ಪ್ರದೀಪ ರಾಠೋಡ, ವಿಕಾಸ ಚವ್ಹಾಣ, ಶಿವಾನಂದ ರಾಠೋಡ ಮೊದಲಾದವರು ಇದ್ದರು.

ಹಾಲಿ, ಮಾಜಿ ಶಾಸಕರು ರಾಜಕಾರಣ ಮಾಡುವಾಗ ರಾಜಕಾರಣ ಮಾಡಿ.ಬಡವರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯಕ್ಕೆ ಬನ್ನಿ. ಕೆಲವರು ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡುವುದು, ರೊಕ್ಕಾ ಎತ್ತುವುದು ಮಾಡುತ್ತಿದ್ದಾರೆ. ಅನವಶ್ಯಕವಾಗಿ ಬಡವರಿಗೆ ತೊಂದರೆ ಕೊಡುತ್ತಿರುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ