ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)

ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)


ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ತಾಂಡಾದಲ್ಲಿ ( Koluru tanda) ಶತಮಾನಗಳಿಂದ ವಾಸಿಸುತ್ತಿರುವ ನಿವಾಸಿಗಳಿಗೆ ವಾಸಿಸುತ್ತಿರುವ ಜಾಗೆಯ ಕುರಿತು ಗೊಂದಲ ಸೃಷ್ಟಿಸಿ ಅದರ ದುರ್ಲಾಭ ಪಡೆದುಕೊಳ್ಳಲು ಹಾಲಿ, ಮಾಜಿ ಶಾಸಕರ ಹೆಸರುಗಳನ್ನು ಬಳಸಿಕೊಂಡು ಕೆಲವು ಪುಢಾರಿಗಳು ವಸೂಲಿ ದಂಧೆಗೆ ಇಳಿದಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಆಗ್ರಹಿಸಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ತಾಂಡಾ ನಿವಾಸಿಗಳೊಂದಿಗೆ ಆಗಮಿಸಿದ್ದ ಅವರು ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ತಾಲ್ಲೂಕಿನ ಕೋಳೂರು ತಾಂಡಾ Koluru tanda) ನಿವಾಸಿಗಳು ತಾಂಡಾದ ಸರ್ವೆ ನಂ.167//3ಬ, 167//2, 167//1 , 169//* ರಲ್ಲಿನ ಮಾಲೀಕರುಗಳಿಗೆ ತಮ್ಮ ಸ್ವಂತ ಹಣವನ್ನು ಕೊಟ್ಟು ಅವತ್ತಿನ ಕಾಲದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈಚೇಗೆ ಸರ್ಕಾರದ ಸುತ್ತೋಲೆಯಂತೆ ನಮ್ಮ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದರ ದುರುಪಯೋಗವನ್ನು ಮೂಲ ಮಾಲೀಕರೂ ಹಾಗೂ ಮಧ್ಯವರ್ತಿಗಳು ಪಡೆದುಕೊಂಡು ಇಲ್ಲಿನ ನಿವಾಸಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಜೊತೆಗೆ ಇರುವ ಕೆಲವು ಪುಢಾರಿಗಳು ಈ ರೀತಿ ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದು ಜನಪ್ರತಿನಿಧಿಗಳ ಮುಖಕ್ಕೆ ಕಪ್ಪು ಮಸಿ ಬಳಿಯುವ ಕುತಂತ್ರವೂ ನಡೆದಿದೆ. ಇದಕ್ಕೆ ಹಾಲಿ, ಮಾಜಿ ಶಾಸಕರು ಆಸ್ಪದ ಕೊಡದೇ ಅಂತವರಿಗೆ ತಿಳಿವಳಿಕೆ ಹೇಳಬೇಕು ಎಂದು ಮನವಿ ಮಾಡಿದರು.

ಸರ್ಕಾರಕ್ಕೆ ಪುಕ್ಕಟೆಯಾಗಿ ಜಮೀನು ಕೊಟ್ಟಿದ್ದೇವೆ.ಅದಕ್ಕಾಗಿ ನಮಗೆ ಪರಿಹಾರ ಕೊಡಬೇಕು ಎಂದು ವಿನಾಕಾರಣ ಕೆಲವು ಪಟ್ಟಭದ್ರರು ಸರಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.ಅಧಿಕಾರಿಗಳಿಗೆ ಧಮಕಿ ಹಾಕಿ ತಮಗೆ ಸಂಬಂಧಪಡದ ಜಾಗೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸದರಿ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಡವರಿಗೆ ಅನ್ಯಾಯ ಆಗದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಇಂತಹ ದುರ್ಮಾರ್ಗದಿಂದ ಬಡವರಿಗೆ ತೊಂದರೆ ಕೊಡುವ ಕೆಲಸ ಮುಂದುವರೆದರೆ, ನಮ್ಮ ತಾಂಡಾವನ್ನು ಕಂದಾಯ ಗ್ರಾಮ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಮೂಲ ಮಾಲೀಕರಿಗೆ ಹಣ ಕೊಟ್ಟು ಜಮೀನು ಖರೀದಿ ಮಾಡಿದ್ದು ಅವರಿಗೆ ಯಾವುದೇ ರೀತಿಯ ಪರಿಹಾರವನ್ನು ನೀಡಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಿದರು.

ತಾಂಡಾದ ಪ್ರಮುಖರಾದ ಶಾಂತಾರಾಮ ಮೇಲ್ಮನಿ, ರಾಮಸ್ವಾಮಿ ಸೀತಿಮನಿ, ಪ್ರತಾಪ ಸೀತಿಮನಿ, ತುಳಜಾರಾಮ ಚವ್ಹಾಣ, ಸಯಭಾಷ ದಿಂಡೂರ, ಮುತ್ತು ಚವ್ಹಾಣ, ಪ್ರದೀಪ ರಾಠೋಡ, ವಿಕಾಸ ಚವ್ಹಾಣ, ಶಿವಾನಂದ ರಾಠೋಡ ಮೊದಲಾದವರು ಇದ್ದರು.

ಹಾಲಿ, ಮಾಜಿ ಶಾಸಕರು ರಾಜಕಾರಣ ಮಾಡುವಾಗ ರಾಜಕಾರಣ ಮಾಡಿ.ಬಡವರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯಕ್ಕೆ ಬನ್ನಿ. ಕೆಲವರು ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡುವುದು, ರೊಕ್ಕಾ ಎತ್ತುವುದು ಮಾಡುತ್ತಿದ್ದಾರೆ. ಅನವಶ್ಯಕವಾಗಿ ಬಡವರಿಗೆ ತೊಂದರೆ ಕೊಡುತ್ತಿರುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್