ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)

ಶಾಸಕರು, ಮಾಜಿ ಶಾಸಕರ ಹೆಸರಿನಲ್ಲಿ ಪುಢಾರಿಗಳಿಂದ ಹಣ ವಸೂಲಿ..! ತಾಂಡಾ ಮಂದಿಯ ಆಕ್ರೋಶ (ವಿಡಿಯೋ ನೋಡಿ)


ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ತಾಂಡಾದಲ್ಲಿ ( Koluru tanda) ಶತಮಾನಗಳಿಂದ ವಾಸಿಸುತ್ತಿರುವ ನಿವಾಸಿಗಳಿಗೆ ವಾಸಿಸುತ್ತಿರುವ ಜಾಗೆಯ ಕುರಿತು ಗೊಂದಲ ಸೃಷ್ಟಿಸಿ ಅದರ ದುರ್ಲಾಭ ಪಡೆದುಕೊಳ್ಳಲು ಹಾಲಿ, ಮಾಜಿ ಶಾಸಕರ ಹೆಸರುಗಳನ್ನು ಬಳಸಿಕೊಂಡು ಕೆಲವು ಪುಢಾರಿಗಳು ವಸೂಲಿ ದಂಧೆಗೆ ಇಳಿದಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಆಗ್ರಹಿಸಿದರು.

Join Our Telegram: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ತಾಂಡಾ ನಿವಾಸಿಗಳೊಂದಿಗೆ ಆಗಮಿಸಿದ್ದ ಅವರು ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ತಾಲ್ಲೂಕಿನ ಕೋಳೂರು ತಾಂಡಾ Koluru tanda) ನಿವಾಸಿಗಳು ತಾಂಡಾದ ಸರ್ವೆ ನಂ.167//3ಬ, 167//2, 167//1 , 169//* ರಲ್ಲಿನ ಮಾಲೀಕರುಗಳಿಗೆ ತಮ್ಮ ಸ್ವಂತ ಹಣವನ್ನು ಕೊಟ್ಟು ಅವತ್ತಿನ ಕಾಲದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ ಈಚೇಗೆ ಸರ್ಕಾರದ ಸುತ್ತೋಲೆಯಂತೆ ನಮ್ಮ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದರ ದುರುಪಯೋಗವನ್ನು ಮೂಲ ಮಾಲೀಕರೂ ಹಾಗೂ ಮಧ್ಯವರ್ತಿಗಳು ಪಡೆದುಕೊಂಡು ಇಲ್ಲಿನ ನಿವಾಸಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Hunagund: 528 ವಿದ್ಯಾರ್ಥಿಗಳಿಗೆ ಒಂದೇ ಬಸ್..!

ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಜೊತೆಗೆ ಇರುವ ಕೆಲವು ಪುಢಾರಿಗಳು ಈ ರೀತಿ ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದು ಜನಪ್ರತಿನಿಧಿಗಳ ಮುಖಕ್ಕೆ ಕಪ್ಪು ಮಸಿ ಬಳಿಯುವ ಕುತಂತ್ರವೂ ನಡೆದಿದೆ. ಇದಕ್ಕೆ ಹಾಲಿ, ಮಾಜಿ ಶಾಸಕರು ಆಸ್ಪದ ಕೊಡದೇ ಅಂತವರಿಗೆ ತಿಳಿವಳಿಕೆ ಹೇಳಬೇಕು ಎಂದು ಮನವಿ ಮಾಡಿದರು.

ಸರ್ಕಾರಕ್ಕೆ ಪುಕ್ಕಟೆಯಾಗಿ ಜಮೀನು ಕೊಟ್ಟಿದ್ದೇವೆ.ಅದಕ್ಕಾಗಿ ನಮಗೆ ಪರಿಹಾರ ಕೊಡಬೇಕು ಎಂದು ವಿನಾಕಾರಣ ಕೆಲವು ಪಟ್ಟಭದ್ರರು ಸರಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.ಅಧಿಕಾರಿಗಳಿಗೆ ಧಮಕಿ ಹಾಕಿ ತಮಗೆ ಸಂಬಂಧಪಡದ ಜಾಗೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸದರಿ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಡವರಿಗೆ ಅನ್ಯಾಯ ಆಗದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಇಂತಹ ದುರ್ಮಾರ್ಗದಿಂದ ಬಡವರಿಗೆ ತೊಂದರೆ ಕೊಡುವ ಕೆಲಸ ಮುಂದುವರೆದರೆ, ನಮ್ಮ ತಾಂಡಾವನ್ನು ಕಂದಾಯ ಗ್ರಾಮ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಮೂಲ ಮಾಲೀಕರಿಗೆ ಹಣ ಕೊಟ್ಟು ಜಮೀನು ಖರೀದಿ ಮಾಡಿದ್ದು ಅವರಿಗೆ ಯಾವುದೇ ರೀತಿಯ ಪರಿಹಾರವನ್ನು ನೀಡಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಿದರು.

ತಾಂಡಾದ ಪ್ರಮುಖರಾದ ಶಾಂತಾರಾಮ ಮೇಲ್ಮನಿ, ರಾಮಸ್ವಾಮಿ ಸೀತಿಮನಿ, ಪ್ರತಾಪ ಸೀತಿಮನಿ, ತುಳಜಾರಾಮ ಚವ್ಹಾಣ, ಸಯಭಾಷ ದಿಂಡೂರ, ಮುತ್ತು ಚವ್ಹಾಣ, ಪ್ರದೀಪ ರಾಠೋಡ, ವಿಕಾಸ ಚವ್ಹಾಣ, ಶಿವಾನಂದ ರಾಠೋಡ ಮೊದಲಾದವರು ಇದ್ದರು.

ಹಾಲಿ, ಮಾಜಿ ಶಾಸಕರು ರಾಜಕಾರಣ ಮಾಡುವಾಗ ರಾಜಕಾರಣ ಮಾಡಿ.ಬಡವರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯಕ್ಕೆ ಬನ್ನಿ. ಕೆಲವರು ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡುವುದು, ರೊಕ್ಕಾ ಎತ್ತುವುದು ಮಾಡುತ್ತಿದ್ದಾರೆ. ಅನವಶ್ಯಕವಾಗಿ ಬಡವರಿಗೆ ತೊಂದರೆ ಕೊಡುತ್ತಿರುವವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಬಂಜಾರ ಸಮಾಜದ ಮುಖಂಡ ರವಿ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ