Inauguration of Gramdevate Jatre Office: Determination for the success of the fair with the cooperation of all the society

ಗ್ರಾಮದೇವತೆ ಜಾತ್ರೆ ಕಾರ್ಯಾಲಯ ಉದ್ಘಾಟನೆ: ಸರ್ವ ಸಮಾಜದವರ ಸಹಕಾರದಿಂದ ಜಾತ್ರೆ ಯಶಸ್ವಿಗೆ ನಿರ್ಣಯ

ಗ್ರಾಮದೇವತೆ ಜಾತ್ರೆ ಕಾರ್ಯಾಲಯ ಉದ್ಘಾಟನೆ: ಸರ್ವ ಸಮಾಜದವರ ಸಹಕಾರದಿಂದ ಜಾತ್ರೆ ಯಶಸ್ವಿಗೆ ನಿರ್ಣಯ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯನ್ನು ಮೇ. 30 ರಿಂದ ಐದು ದಿನಗಳ ಕಾಲ ಜರುಗಿಸಲಾಗುತ್ತಿದ್ದು ಸರ್ವ ಸಮಾಜದವರನ್ನು ಒಳಗೊಂಡು ಜಾತ್ರೆಯನ್ನು ಯಶಸ್ವಿಗೊಳಿಸಲು ಇಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಕಮೀಟಿ ಪ್ರಮುಖರು ನಿರ್ಣಯ ಕೈಗೊಂಡರು.

ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಆವರಣದಲ್ಲಿರುವ ಸಂಗಮೇಶ್ವರ ವಸತಿ ನಿಲಯದ ಪಕ್ಕದ ದಾಸೋಹ ಕೋಣೆಯಲ್ಲಿ ಶುಕ್ರವಾರ ಆರಂಭಿಸಲಾದ ಗ್ರಾಮದೇವತೆ ಜಾತ್ರಾ ಕಾರ್ಯಾಲಯ ಉದ್ಘಾಟನೆ ಬಳಿಕ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಕಮೀಟಿ ಮುಖಂಡ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ಮಾತನಾಡಿ, ಜಾತ್ರೆಯನ್ನು ಯಶಸ್ವಿಗೊಳಿಸಲು ಹಲವು ಸಮೀತಿಗಳನ್ನು ರಚಿಸಲಾಗುತ್ತಿದ್ದು ಹಿಂದಿನ ಜಾತ್ರೆಯಲ್ಲಿ ನೇತೃತ್ವ ವಹಿಸಿದ್ದವರ ಜೊತೆಗೆ ಇನ್ನುಳಿದವರನ್ನು ಸಮೀತಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸಲಹೆ ಮಾಡಲಾಯಿತು. ವಿಬಿಸಿ ಹೈಸ್ಕೂಲ್ ಆಡಳಿತ ಮಂಡಳಿಯವರೇ ಜಾತ್ರೆಯ ಶೇ.60-70ರಷ್ಟು ಖರ್ಚನ್ನು ಶಾಲೆಯ ಮೈದಾನವನ್ನು ಬಾಡಿಗೆಗೆ ನೀಡುವ ಮೂಲಕ ಭರಿಸಲು ಒಪ್ಪಿರುವುದಕ್ಕೆ ಕಮೀಟಿ ಪರವಾಗಿ, ಊರಿನ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.

ಹಣಕಾಸು, ಪ್ರಚಾರ, ಮೆರವಣಿಗೆ, ಆಹಾರ, ಮುದ್ರಣ, ಸಾಂಸ್ಕೃತಿಕ, ಅಲಂಕಾರ ಸೇರಿದಂತೆ ಹಲವು ಸಮೀತಿಗಳನ್ನು ರಚಿಸಲಾಗುತ್ತದೆ ಎಂದು ಹೇಳಿದರು.

ವೀರಶೈವ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಗೌರವ ಕಾರ್ಯದರ್ಶಿ ಎಂ. ಬಿ. ನಾವದಗಿ ಮಾತನಾಡಿ, ಜಾತ್ರೆಯನ್ನು ಸರ್ವ ಸಮಾಜದವರ ಸಹಕಾರದಿಂದ ಯಶಸ್ವಿಗೊಳಿಸೋಣ. ಹಿಂದಿನ ಸಮೀತಿಯಲ್ಲಿ ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದು ಅವರನ್ನೇ ಮುಂದುವರೆಸಲು ಈಚೇಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಎಲ್ಲರೂ ಒಗ್ಗೂಡಿ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಜಾತ್ರೆಯ ಯಶಸ್ವಿಗಾಗಿ ರಚಿಸಲಾಗುವ ಸಮೀತಿಗಳಲ್ಲಿ ಇನ್ನಷ್ಟು ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಆಸಕ್ತರು ವಿವಿಧ ಕಮೀಟಿಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿನಂತಿಸಿದರೆ ಪರಿಶೀಲನೆ ನಡೆಸಿ ಪರಿಗಣಿಸಲಾಗುವುದು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್. ಎಸ್. ಮಾಲಗತ್ತಿ, ಕಾಂಗ್ರೆಸ್ ಮುಖಂಡ ಅಬ್ದುಲ್ ಗಫೂರ್ ಮಕಾನದಾರ ಮಾತನಾಡಿ, ಕಳೆದ ಬಾರಿ ರಚಿಸಿದ್ದ ಸಮಿತಿಯವರಲ್ಲಿ ಪ್ರಮುಖರಿಗೆ ಸಮಿತಿ ರಚಿಸಲು ಅವಕಾಶ ಕಲ್ಪಿಸಿ ಗೊಂದಲಕ್ಕೆ ಆಸ್ಪದ ಇಲ್ಲದಂತೆ ಜಾತ್ರೆಯನ್ನು ನಡೆಸಿ ಎಂದರು.

ಕರ್ನಾಟಕ ಬ್ಯಾಂಕ್ ಮಾಜಿ ನಿರ್ದೇಶಕ ವೆಂಕನಗೌಡ ಪಾಟೀಲ ಮಾತನಾಡಿ, ಗ್ರಾಮದೇವತೆ ಜಾತ್ರೆಯ ಸಮೀತಿಗಳಲ್ಲಿ ಯುವಕರಿಗೆ ಆದ್ಯತೆ ನೀಡಬೇಕು. ಯಾರನ್ನೋ ಓಲೈಸುವುದಕ್ಕಾಗಿ ಮೆಚ್ಚಿಸುವುದಕ್ಕಾಗಿ ಸಮೀತಿಯಲ್ಲಿ ಹೆಸರುಗಳನ್ನು ಸೇರಿಸಬೇಡಿ. ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಯಶಸ್ವಿಗೊಳಿಸೋಣ ಎಂದರು.

ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖಂಡರಾದ ಮಲ್ಲಿಕಾರ್ಜುನ ನಾಡಗೌಡ, ಶರಣು ಸಜ್ಜನ, ಸುನೀಲ ಇಲ್ಲೂರ, ಸುಧೀರ ನಾವದಗಿ, ಶಿವಕುಮಾರ ಬಿರಾದಾರ, ರಾಹುಲಗೌಡ ಪಾಟೀಲ, ಬಾಬು ಬಿರಾದಾರ, ಕಾಮರಾಜ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಹುಲಗಪ್ಪ ನಾಯ್ಕಮಕ್ಕಳ, ರಾಜು ಕರಡ್ಡಿ, ಗುರುಸ್ವಾಮಿ ಬೂದಿಹಾಳಮಠ, ಉಮೇಶ ರಾಯನಗೌಡರ, ಶ್ರೀಶೈಲ ಹೂಗಾರ, ಮುತ್ತು ರಾಯಗೊಂಡ ಸೇರಿದಂತೆ ಪುರಸಭೆ ಸದಸ್ಯರು, ಆರ್ಚಕ ಗುಂಡು ಬಡಿಗೇರ ಮೊದಲಾದವರು ಪಾಲ್ಗೊಂಡಿದ್ದರು.

Latest News

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ,

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ),

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು