ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ