ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ