ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600