ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು