ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ