ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳ ಪದಗ್ರಹಣ

ಇಳಕಲ್: ಭಾವಸಾರ ಕ್ಷತ್ರೀಯ ಸಮಾಜದಿಂದ
ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘ ನಿ, ಇಲಕಲ್ಲ ಇದರ ಉದ್ಘಾಟನಾ ಹಾಗೂ ನಿರ್ದೇಶಕ ಮಂಡಳಿಯ ಪದಗ್ರಹಣ ಸಮಾರಂಭ ನಗರದ ಶ್ರೀ ಹಿಂಗುಲಾಂಬಿಕಾ ದೇವಿ ದೇವಸ್ಥಾನದ ಸಭಾ ಭವನದಲ್ಲಿ ನೆರವೇರಿತು.

ದಿವ್ಯ ಸಾನಿಧ್ಯ ವಹಿಸಿದ್ದ ಸದ್ಗುರು ಶ್ರೀ ಹ.ಬ.ಪ ಪ್ರಭಾಕರದಾದಾ ಬೋದಲೆ ಮಹಾರಾಜ
ಶ್ರೀ ಕ್ಷೇತ್ರ ಪಂಢರಪುರ – ಬಾಗಲಕೋಟ, ಸಮಾಜದ ಹಿರಿಯರಾದ ಪಲ್ಲಾದರಾವ್ ಮಹೇಂದ್ರಕರ, ದಿಲೀಪ ದೇವಗಿರಿಕರ, ಲಕ್ಷ್ಮಣ್ ಮಹೇಂದಕರ, ನಾರಾಯಣರಾವ ಅಂಬೋರೆ ಸೇರಿದಂತೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಎರೆದು, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಶಾಂತ್ ಹಂಚಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ಸಮಾಜದ ಹಿರಿಯರಾದ ದಿಲೀಪ್ ದೇವಗೀರಕರ್ ಅವರು ಮಾತನಾಡಿ, ಸಮಾಜದಹಿರಿಯರ ಬಹುದಿನಗಳ ಕನಸು ಇಂದು ಈ ಯುವಕರ ಮೂಲಕ ಸಕಾರಗೊಂಡಿದೆ. ಸಮಾಜ ಬಾಂಧವರು ಈ ಸರ್ಕಾರಿ ಸಂಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಉದ್ಯೋಗ ವ್ಯಾಪಾರಗಳನ್ನು ಬಲಪಡಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ರು.

ಇದನ್ನು ಓದಿ: ಮಚ್ಚಿನಿಂದ ಹೊಡೆದಾಡಿಕೊಂಡು ಸತ್ತ ನವಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮೂರನೇ ವ್ಯಕ್ತಿ ಕೈವಾಡ ಶಂಕೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಸದ್ಗುರು ಪ್ರಭಾಕರ್ ದಾದಾ ಬೋಧಲೆ ಮಹಾರಾಜ್ ಅವರು ಆಶೀರ್ವಚನ ನೀಡಿ, ಈ ಮೊದಲಿಗಿಂತಲೂ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳೆದಿದೆ. ಈಗಿನ ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡುವ ಅವಶ್ಯಕತೆ ಇದೆ. ಅಜವಾದಾರಿಯನ್ನು ತಂದೆ ತಾಯಿಯರು ಹಿರಿಯರು ನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಸಮಾಜ ತಲೆತಗ್ಗಿಸುವಂತಹ ಕೆಲಸ ಆಗಬಾರದು. ಈಗ ನಾನು ಉದ್ಘಾಟಿಸಿರುವ ಈ ಪತ್ತಿನ ಸಹಕಾರಿ ಸಂಘ ಮುಂದೊಂದು ದಿನ ಹೆಮ್ಮೆರವಾಗಿ ಬೆಳೆಯುತ್ತಿದೆ ಎಂಬ ನಂಬಿಕೆ ನನಗಿದೆ, ಮುಂದೊಂದು ದಿನ ಈ ಸಹಕಾರಿ ಸಂಘ ಬ್ಯಾಂಕ್ ಆಗಿ ಪರಿವರ್ತನೆ ಯಾಗುವುದನ್ನು ನಾನು ನೋಡಲಿದ್ದೇನೆ ಎಂದು ಭವಿಷ್ಯ ನುಡಿದರು.

ಅಲ್ಲದೆ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸೌಜನ್ಯಪೂರ್ವಕವಾಗಿ ಪತಿನ ಸಹಕಾರಿ ಸಂಘದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಆಶೀರ್ವದಿಸಿದ್ದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪೂಜ್ಯರು ಹಾಗೂ ಸಮಾಜದ ಹಿರಿಯರು ಗೌರವಿಸಿ ಸಕರಿಸಿದ್ದರು.

ಆಡಳಿತ ಮಂಡಳಿ ವತಿಯಿಂದ ವೇದಿಕೆ ಮೇಲಿದ್ದ ಗಣ್ಯರ ಸಮ್ಮುಖದಲ್ಲಿ ಶೇರುದಾರರಿಗೆ ಶೇರು ಪತ್ರ ಹಾಗೂ ಖಾತೆದಾರರಿಗೆ ಪಾಸ್ ಬುಕ್ ವಿತರಣೆ ಮಾಡಲಾಯಿತು.

ನೂತನ ಆಡಳಿತ ಮಂಡಳಿ ವತಿಯಿಂದ ಸಮಾಜದ ಗುರುಗಳು ಹಾಗೂ ಸಮಾಜದ ಹಿರಿಯರಿಗೆ ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಇಳಕಲ್ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಪ್ರಶಾಂತಕುಮಾರ ಹಂಚಾಟೆ, ಉಪಾಧ್ಯಕ್ಷ ಸುನೀಲಕುಮಾರ ದೇವಗಿರಿಕರ, ನಿರ್ದೇಶಕರಾದ
ಪ್ರಕಾಶ ದೇವಗಿರಿಕರ, ರಮೇಶ್ ಹಂಚಾಟೆ, ಜಮದಗ್ನಿ ಮಹೇಂದ್ರಕರ, ಲಕ್ಷಣ ದಾಯಮಲೆ, ರಾಮಚಂದ್ರ ಕಠಾರೆ, ಸಂತೋಷ ದೇವಗಿರಿಕರ,
ಭಾಗ್ಯಶ್ರೀ ಹಂಚಾಟೆ, ರೇಣುಕಾ ದೇವಗಿರಿಕರ, ಗೀತಾಬಾಯಿ ಲೋಕರೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು, ಸಮಾಜದ ಹಿರಿಯರು, ಯುವಕರು, ಪ್ರಮುಖರು ಪಾಲ್ಗೊಂಡಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ