Inauguration of the new chariot at Kuntoji

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ತನ್ನನ್ನು ಪರಿವರ್ತಿಸಿಕೊಳ್ಳುವುದೇ ನಿಜವಾದ ಧರ್ಮ-ಕೊಪ್ಪಳ ಶ್ರೀ

ಮುದ್ದೇಬಿಹಾಳ : ಮನುಷ್ಯ ಸಂತೋಷವಾಗಿ ಬದುಕಲು ಅನ್ನ, ಆಶ್ರಯ, ಅರಿವೆ ಬೇಕು. ಅದರ ಜೊತೆಗೆ ನಾನು ಈ ಭೂಮಿಯ ಮೇಲೆ ಹೇಗೆ ಬದುಕುಬೇಕು ಎಂಬ ಅರಿವು ಇಟ್ಟುಕೊಂಡು ಬದುಕುಬೇಕು ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕುಂಟೋಜಿಯ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ನೂತನ ರಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಅರಿವಿಲ್ಲದೇ ಬದುಕಬಾರದು,ಜ್ಞಾನ ತಿಳಿವಳಿಕೆ ಇಲ್ಲದ ಬದುಕು ಅಲ್ಲಿ ದುಃಖ,ಚಿಂತೆ ಮನೆ ಮಾಡುತ್ತದೆ. ಮನೆಯಲ್ಲಿ ಸೊಳ್ಳೆಯನ್ನು ಓಡಿಸಲು ಗುಡನೈಟ್ ಹಚ್ಚಿದಂತೆ ಬದುಕಿನಲ್ಲಿ ಕೆಟ್ಟ ವಿಚಾರಗಳು ಹೋಗುವುದಕ್ಕೆ ಗುಡಲೈಫ್ ಹಚ್ಚಬೇಕು. ಇಲ್ಲಿ ಯಾರಿಗೆ ಯಾರೂ ಬದಲಾವಣೆ ಮಾಡುವುದಿಲ್ಲ. ಜಗತ್ತಿನಲ್ಲಿ ತನ್ನನ್ನು ತಾನೇ ಪರಿವರ್ತನೆಯೇ ನಿಜವಾದ ಧರ್ಮವಾಗಿದೆ ಎಂದು ಹೇಳಿದರು.

ಮನಸ್ಸನ್ನು ಒಳ್ಳೆಯ ವಿಷಯಗಳಿಂದ ತುಂಬಿಸಿಕೊಳ್ಳಬೇಕು. ಸುಖ ದುಃಖದ ಪರಿಕಲ್ಪನೆಗಳು ಬೇರೆಲ್ಲೂ ಇಲ್ಲ. ನಮ್ಮಲ್ಲಿಯೇ ಇದೆ. ಕಲ್ಲು ಒಡೆಯುವವನ ಕೈಗೆ ಸಿಕ್ಕರೆ ಕಂಕರ ಆಗುತ್ತದೆ. ಶಿಲ್ಪಿ ಕೈಯ್ಯಲ್ಲಿ ಕೊಟ್ಟರೆ ಅದು ಶಂಕರ ಆಗುತ್ತದೆ. ಕಲ್ಲಿನಲ್ಲಿ ಏನೂ ಇಲ್ಲ. ಕಲ್ಲನ್ನು ರೂಪಿಸುವವನ ಕೈಯ್ಯಲ್ಲಿ ಅದು ಕಂಕರ, ಶಂಕರ ಆಗುವ ಶಕ್ತಿ ಹೊಂದಿದೆ ಎಂದರು.

ದೇವನ ಮನೆಯಲ್ಲಿರುವ ನಾವು ದೇವರಿಗೆ ಮನೆಯನ್ನು ಕಟ್ಟಿದ್ದೇವೆ ಎಂದು ಹೇಳುತ್ತ ತಿರುಗುತ್ತೇವೆ. ಭೂಮಿಗೆ ಬರಬೇಕಾದರೆ ಬರಿಗೈಯ್ಯಲ್ಲಿ ನಾವು ಬಂದಿದ್ದೇವೆ. ದೇವರು ಎಂತಹ ಕರುಣಾಮಯಿ ಎಂದರೆ ನಾವು ಹುಟ್ಟುವುದಕ್ಕಿಂತ ಮುಂಚೆಯೇ ನಮ್ಮ ಸಲುವಾಗಿ ತಾಯಿಯ ಎದೆ ಹಾಲಿನಲ್ಲಿ ಪೌಷ್ಟಿಕಾಂಶವುಳ್ಳ ಎಲ್ಲ ರೀತಿಯ ಆಹಾರವನ್ನು ಒದಗಿಸಿದ್ದಾನೆ. ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು ಎಂದು ಹೇಳಿದರು.

ಕುಂಟೋಜಿ ಇತಿಹಾಸದಲ್ಲಿಯೇ ಇದೊಂದು ಹೊಸ ಅಧ್ಯಾಯ ನೂತನ ರಥ ಲೋಕಾರ್ಪಣೆ ಸಮಾರಂಭ. ಕಟ್ಟಿಗೆಯ ರಥ ಲೋಕಾರ್ಪಣೆಯಾದರೆ ಸಾಲುವುದಿಲ್ಲ.ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು. ಬಸವಣ್ಣನವರು ಇದಕ್ಕೆ ಯಜ್ಞ ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ವಸುದೈವ ಕುಟುಂಬದ ಕಲ್ಪನೆ, ದ್ವೇಷ, ಎಲ್ಲರೂ ತನ್ನವರೆಂಬ ಭಾವ, ನಿಂದನೆಗಳಿಲ್ಲದಿದ್ದವರು ದೇವರಾಗಲು ಸಾಧ್ಯವಿದೆ. ಆದರೆ ಮನುಷ್ಯ ದ್ವೇಷ, ಮತ್ತೊಬ್ಬರನ್ನು ನಿಂದಿಸುವುದು, ಪರಸ್ಪರ ಸ್ನೇಹಭಾವವನ್ನು ಹೊಂದುವುದನ್ನು ಸಹಿಸುತ್ತಿಲ್ಲ. ಆತ ದೇವರಾಗಲು ಅಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೇ.ಪಡದಯ್ಯ ಮಠ, ವೀರಯ್ಯ ಶಾಸ್ತ್ರಿಗಳು, ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡ ಸಂಗನಗೌಡ ಪಾಟೀಲ, ರುದ್ರಯ್ಯ ಮಠ, ಶಿವಲಿಂಗಪ್ಪ ಗಸ್ತಿಗಾರ, ಶಿಲ್ಪಿ ಮಲ್ಲಪ್ಪ ಬಡಿಗೇರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ, ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ, ಪಿಡಿಒ ಪರಶುರಾಮ ನಾಯ್ಕೋಡಿ, ಶಿವಣ್ಣ ಚಿನಿವಾಲರ, ಶರಣು ಹಿರೇಮಠ ಇದ್ದರು. ಸಿಂಧೂ ಹಿರೇಮಠ ಪ್ರಾರ್ಥಿಸಿದರು. ಶರಣು ಹಿರೇಮಠ ನಿರೂಪಿಸಿದರು.ಮನಸ್ವಿ ಬಿರಾದಾರ ವಚನ ಗಾಯನಕ್ಕೆ ನೃತ್ಯ ಮಾಡಿದಳು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ