Inauguration of the new chariot at Kuntoji

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ತನ್ನನ್ನು ಪರಿವರ್ತಿಸಿಕೊಳ್ಳುವುದೇ ನಿಜವಾದ ಧರ್ಮ-ಕೊಪ್ಪಳ ಶ್ರೀ

ಮುದ್ದೇಬಿಹಾಳ : ಮನುಷ್ಯ ಸಂತೋಷವಾಗಿ ಬದುಕಲು ಅನ್ನ, ಆಶ್ರಯ, ಅರಿವೆ ಬೇಕು. ಅದರ ಜೊತೆಗೆ ನಾನು ಈ ಭೂಮಿಯ ಮೇಲೆ ಹೇಗೆ ಬದುಕುಬೇಕು ಎಂಬ ಅರಿವು ಇಟ್ಟುಕೊಂಡು ಬದುಕುಬೇಕು ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕುಂಟೋಜಿಯ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ನೂತನ ರಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಅರಿವಿಲ್ಲದೇ ಬದುಕಬಾರದು,ಜ್ಞಾನ ತಿಳಿವಳಿಕೆ ಇಲ್ಲದ ಬದುಕು ಅಲ್ಲಿ ದುಃಖ,ಚಿಂತೆ ಮನೆ ಮಾಡುತ್ತದೆ. ಮನೆಯಲ್ಲಿ ಸೊಳ್ಳೆಯನ್ನು ಓಡಿಸಲು ಗುಡನೈಟ್ ಹಚ್ಚಿದಂತೆ ಬದುಕಿನಲ್ಲಿ ಕೆಟ್ಟ ವಿಚಾರಗಳು ಹೋಗುವುದಕ್ಕೆ ಗುಡಲೈಫ್ ಹಚ್ಚಬೇಕು. ಇಲ್ಲಿ ಯಾರಿಗೆ ಯಾರೂ ಬದಲಾವಣೆ ಮಾಡುವುದಿಲ್ಲ. ಜಗತ್ತಿನಲ್ಲಿ ತನ್ನನ್ನು ತಾನೇ ಪರಿವರ್ತನೆಯೇ ನಿಜವಾದ ಧರ್ಮವಾಗಿದೆ ಎಂದು ಹೇಳಿದರು.

ಮನಸ್ಸನ್ನು ಒಳ್ಳೆಯ ವಿಷಯಗಳಿಂದ ತುಂಬಿಸಿಕೊಳ್ಳಬೇಕು. ಸುಖ ದುಃಖದ ಪರಿಕಲ್ಪನೆಗಳು ಬೇರೆಲ್ಲೂ ಇಲ್ಲ. ನಮ್ಮಲ್ಲಿಯೇ ಇದೆ. ಕಲ್ಲು ಒಡೆಯುವವನ ಕೈಗೆ ಸಿಕ್ಕರೆ ಕಂಕರ ಆಗುತ್ತದೆ. ಶಿಲ್ಪಿ ಕೈಯ್ಯಲ್ಲಿ ಕೊಟ್ಟರೆ ಅದು ಶಂಕರ ಆಗುತ್ತದೆ. ಕಲ್ಲಿನಲ್ಲಿ ಏನೂ ಇಲ್ಲ. ಕಲ್ಲನ್ನು ರೂಪಿಸುವವನ ಕೈಯ್ಯಲ್ಲಿ ಅದು ಕಂಕರ, ಶಂಕರ ಆಗುವ ಶಕ್ತಿ ಹೊಂದಿದೆ ಎಂದರು.

ದೇವನ ಮನೆಯಲ್ಲಿರುವ ನಾವು ದೇವರಿಗೆ ಮನೆಯನ್ನು ಕಟ್ಟಿದ್ದೇವೆ ಎಂದು ಹೇಳುತ್ತ ತಿರುಗುತ್ತೇವೆ. ಭೂಮಿಗೆ ಬರಬೇಕಾದರೆ ಬರಿಗೈಯ್ಯಲ್ಲಿ ನಾವು ಬಂದಿದ್ದೇವೆ. ದೇವರು ಎಂತಹ ಕರುಣಾಮಯಿ ಎಂದರೆ ನಾವು ಹುಟ್ಟುವುದಕ್ಕಿಂತ ಮುಂಚೆಯೇ ನಮ್ಮ ಸಲುವಾಗಿ ತಾಯಿಯ ಎದೆ ಹಾಲಿನಲ್ಲಿ ಪೌಷ್ಟಿಕಾಂಶವುಳ್ಳ ಎಲ್ಲ ರೀತಿಯ ಆಹಾರವನ್ನು ಒದಗಿಸಿದ್ದಾನೆ. ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು ಎಂದು ಹೇಳಿದರು.

ಕುಂಟೋಜಿ ಇತಿಹಾಸದಲ್ಲಿಯೇ ಇದೊಂದು ಹೊಸ ಅಧ್ಯಾಯ ನೂತನ ರಥ ಲೋಕಾರ್ಪಣೆ ಸಮಾರಂಭ. ಕಟ್ಟಿಗೆಯ ರಥ ಲೋಕಾರ್ಪಣೆಯಾದರೆ ಸಾಲುವುದಿಲ್ಲ.ಈ ದೇಹ ಲೋಕಕ್ಕೆ ಅರ್ಪಿತವಾಗಬೇಕು. ಬಸವಣ್ಣನವರು ಇದಕ್ಕೆ ಯಜ್ಞ ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ವಸುದೈವ ಕುಟುಂಬದ ಕಲ್ಪನೆ, ದ್ವೇಷ, ಎಲ್ಲರೂ ತನ್ನವರೆಂಬ ಭಾವ, ನಿಂದನೆಗಳಿಲ್ಲದಿದ್ದವರು ದೇವರಾಗಲು ಸಾಧ್ಯವಿದೆ. ಆದರೆ ಮನುಷ್ಯ ದ್ವೇಷ, ಮತ್ತೊಬ್ಬರನ್ನು ನಿಂದಿಸುವುದು, ಪರಸ್ಪರ ಸ್ನೇಹಭಾವವನ್ನು ಹೊಂದುವುದನ್ನು ಸಹಿಸುತ್ತಿಲ್ಲ. ಆತ ದೇವರಾಗಲು ಅಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೇ.ಪಡದಯ್ಯ ಮಠ, ವೀರಯ್ಯ ಶಾಸ್ತ್ರಿಗಳು, ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಮುಖಂಡ ಸಂಗನಗೌಡ ಪಾಟೀಲ, ರುದ್ರಯ್ಯ ಮಠ, ಶಿವಲಿಂಗಪ್ಪ ಗಸ್ತಿಗಾರ, ಶಿಲ್ಪಿ ಮಲ್ಲಪ್ಪ ಬಡಿಗೇರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ, ಗ್ರಾಪಂ ಅಧ್ಯಕ್ಷ ಜಗದೀಶ ಲಮಾಣಿ, ಪಿಡಿಒ ಪರಶುರಾಮ ನಾಯ್ಕೋಡಿ, ಶಿವಣ್ಣ ಚಿನಿವಾಲರ, ಶರಣು ಹಿರೇಮಠ ಇದ್ದರು. ಸಿಂಧೂ ಹಿರೇಮಠ ಪ್ರಾರ್ಥಿಸಿದರು. ಶರಣು ಹಿರೇಮಠ ನಿರೂಪಿಸಿದರು.ಮನಸ್ವಿ ಬಿರಾದಾರ ವಚನ ಗಾಯನಕ್ಕೆ ನೃತ್ಯ ಮಾಡಿದಳು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು