ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ: ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ: ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಈಚೇಗೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಚಿನ್ನದ ಅಂಗಡಿ ಕಳ್ಳತನ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಚಿನ್ನಾಭರಣ ಮಳಿಗೆಗಳು,ಅಂಗಡಿಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಪೊಲೀಸ್ ಇಲಾಖೆಯಿಂದ ಮೇಲಧಿಕಾರಿಗಳು ಸೂಚನೆ ನೀಡಿದ್ದು ಅಂಗಡಿಕಾರರು ಸೂಕ್ತ ಭದ್ರತೆ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಾಫ ವರ್ತಕರ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.

ಬಂಗಾರದ ಅಂಗಡಿಗಳಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು,ಸಿಸಿಟಿವಿ ಸರಿ ಇರುವ ಬಗ್ಗೆ ಅರಿತುಕೊಂಡು ಸದಾ ಕಾರ್ಯನಿರ್ವಹಣೆಯಲ್ಲಿರುವಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.ಅಂಗಡಿಯಲ್ಲಿ ಸೇಫ್ಟಿ ಲಾಕರ್ ಇರುವ ಬಗ್ಗೆ ಅಂಗಡಿಗೆ ಸಂಶಯುಕ್ತ ಜನರು ಬಂದಾಗ ಕೂಡಲೇ ಪೊಲೀಸ ಠಾಣೆಯ ಗಮನಕ್ಕೆ ತರಬೇಕು ಎಂದು ಹೇಳಿದರು.

ವರ್ತಕ ವೀರೂಪಾಕ್ಷಿ ಪತ್ತಾರ ಮಾತನಾಡಿ, ದ್ಯಾಮವ್ವನ ಕಟ್ಟೆಯ ಬಳಿ ಪೊಲೀಸರ ಚೌಕಿ ಸ್ಥಾಪಿಸಬೇಕು.ಅಲ್ಲಿ ಪೊಲೀಸರು ಸದಾ ಇರುವಂತೆ ನೋಡಿಕೊಂಡರೆ ಕಳ್ಳರಿಗೆ ಭಯ ಇರುತ್ತದೆ ಎಂದರು.
ವರ್ತಕ ಸುನೀಲ ಇಲ್ಲೂರ, ವಿಜಯಕುಮಾರ ಬಡಿಗೇರ ಮಾತನಾಡಿದರು. ಎ.ಎಸ್.ಐ ಕೆ.ಎಸ್.ಅಸ್ಕಿ , ಸರಾಫ ವರ್ತಕರ ಸಂಘದ ಪದಾಧಿಕಾರಿಗಳಾದ ಕಲ್ಯಾಣಕುಮಾರ ನಾಗಠಾಣ, ಜೆ.ಎಸ್.ಓಸ್ವಾಲ್, ಬಿಪಿನ ಓಸ್ವಾಲ್,ಮಲ್ಲಣ್ಣ ಪತ್ತಾರ,ಮಳೀಯಪ್ಪ ಪತ್ತಾರ,ರಾಘವೇಂದ್ರ ಪತ್ತಾರ ಇತರರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ