IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

ವಿಶಾಖಪಟ್ಟಣ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat kohli) ಅವರು ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಿರುವ ಸಂಗತಿ. ಹಾಗೇ ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿಲ್ಲ. IND vs SA Match

ಹೌದು, ಪ್ರಸ್ತುತ ವಿಶಾಖಪಟ್ಟಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ ನಡೆಯಿತು. ಈ ವೇಳೆ ರೋಹಿತ್ ರಿಯಾಕ್ಷನ್ ಭಾರಿ ವೈರಲ್ ಆಗುತ್ತಿದೆ.

ಇದಕ್ಕೆ ಕಾರಣ ಕೊಹ್ಲಿ ಅವರ ಸಲಹೆಯನ್ನು ಕ್ಯಾಪ್ಟನ್ ಕೆ.ಎಲ್. ರಾಹುಲ್ ಒಪ್ಪಲಿಲ್ಲ. ಈ ವೇಳೆ ಮಗದೋರ್ವ ಮಾಜಿ ನಾಯಕ ರೋಹಿತ್ ಶರ್ಮಾ ಅವರ ರಿಯಾಕ್ಷನ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಏನಿದು ಅಂಥ ಘಟನೆ?

ಭಾರತದ ಕ್ಷೇತ್ರರಕ್ಷಣೆ ವೇಳೆ ಈ ಘಟನೆ ನಡೆದಿತ್ತು. ಸ್ಲಿಪ್‌ನಲ್ಲಿ ಎರಡು ಫೀಲ್ಡರ್‌ಗಳನ್ನು ಇರಿಸುವಂತೆ ಕೊಹ್ಲಿ ಸಲಹೆ ನೀಡುತ್ತಾರೆ. ಆದರೆ ಕೊಹ್ಲಿ ಸಲಹೆ ನಿರಾಕರಿಸಿದ ರಾಹುಲ್, ತಮ್ಮ ಸ್ಥಾನಕ್ಕೆ ಮರಳುವಂತೆ ಸೂಚಿಸುತ್ತಾರೆ. ಬಳಿಕ ಬಲಗಡೆ ತಿರುಗಿ ರೋಹಿತ್ ಅವರಲ್ಲಿ ಮುಂದೆ ಬರುವಂತೆ ಸನ್ನೆ ಮಾಡುತ್ತಾರೆ. ಅಲ್ಲೆ ಹತ್ತಿರದಲ್ಲಿ ಇವನ್ನೆಲ್ಲ ಗಮನಿಸುತ್ತಲೇ ಇದ್ದ ರೋಹಿತ್ ಶರ್ಮಾ ನಗುಮುಖದಿಂದಲೇ ಕಾಣಿಸುತ್ತಾರೆ.

ಅಂದ ಹಾಗೆ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದ ಭಾರತ, ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.