ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಹೋರಾಟ ತೀವ್ರಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳು

ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಹೋರಾಟ ತೀವ್ರಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳು

ಮುದ್ದೇಬಿಹಾಳ : ಮೂಲಸೌರ‍್ಯಗಳನ್ನೂ ಒದಗಿಸದೇ ತಾಂತ್ರಿಕ ಕೆಲಸಗಳನ್ನು ಮಾಡಲು ಒತ್ತಡ ಹೇರುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಲೇಖನಿ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಗುರುವಾರದಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. 100ಕ್ಕೂ ಅಧಿಕ ಸೇವೆಗಳನ್ನು ಗ್ರಾಮ ಆಡಳಿತಾಧಿಕಾರಿಗಳು ತುಂಬಾ ಒತ್ತಡದಲ್ಲಿ ಕೆಲಸ ಮಾಡಬೇಕಾಗಿದೆ. ಲ್ಯಾಪ್‌ಟಾಪ್, ಇಂಟರ್‌ನೆಟ್ ಮೂಲಕ ಮಾಡಬೇಕಾದ ಸೇವೆಗಳನ್ನು ಅಗತ್ಯ ಭೌತಿಕ ಸಾಮಗ್ರಿ ನೀಡದೇ ಕೆಲಸ ಮಾಡಲು ಸರ್ಕಾರ ಒತ್ತಡ ಹೇರುತ್ತಿದೆ.ಸರ್ಕಾರಿ ನೌಕರಿ ಯಾಕಾದರೂ ಮಾಡುತ್ತಿದ್ದೇವೆ ಎಂಬ ಬೇಸರದ ಭಾವನೆ ಮೂಡಿದೆ. ಇದರಿಂದ ನೌಕರರ ಮಾನಸಿಕ ಸ್ಥಿತಿ,ಕೌಟುಂಬಿಕ ಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಹೇಳಿದರು.

ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ ನಾಯ್ಕೋಡಿ ಮಾತನಾಡಿ, ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್, ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 50ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಸಂಖ್ಯೆ ಇನ್ನೂ ಹೆಚ್ಚುವ ಮುನ್ನ ಸರ್ಕಾರ ತಕ್ಷಣ ಮಧ್ಯೆಪ್ರವೇಶಿಸಿ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಬೇಕು ಎಂದರು.

ಕಂದಾಯ ನೌಕರರ ಸಂಘದ ಮುಖಂಡ ವೆಂಕಟೇಶ ಅಂಬಿಗೇರ, ಗ್ರಾಮ ಆಡಳಿತ ಅಧಿಕಾರಿ ರಫೀಕ ಮುಲ್ಲಾ, ಶ್ರೀನಿವಾಸ ಹುನಗುಂದ ಮಾತನಾಡಿದರು.

ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ, ದಲಿತ ಮುಖಂಡರಾದ ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ಆನಂದ ದೇವೂರ ಮತ್ತಿತರರು ಬೆಂಬಲಿಸಿದರು. ಹೋರಾಟದ ಸ್ಥಳದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿರ್ವಹಿಸಬೇಕಾದ ಸೇವೆಗಳನ್ನು ಒಂದೇ ಫಲಕದಲ್ಲಿ ಹಾಕಿದ್ದು ಗಮನ ಸೆಳೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಹೋರಾಟಕ್ಕೆ ಕಂದಾಯ ನೌಕರರ ಸಂಘ, ಅಟಲ್‌ಜೀ ಜನಸ್ನೇಹಿ ಕೇಂದ್ರ, ಕರ್ನಾಟಕ ಪರವಾನಿಗೆ ಭೂಮಾಪಕರ ಸಂಘ ಬೆಂಬಲ ಸೂಚಿಸಿದವು.

ಸಾರ್ವಜನಿಕರ ಪರದಾಟ:

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು.ಜಾತಿ,ಆದಾಯ ಪ್ರಮಾಣಪತ್ರಗಳು, ಜನನ,ಮರಣ ಪ್ರಮಾಣಪತ್ರಗಳು ಸಕಾಲಕ್ಕೆ ದೊರೆಯದೇ ಸಾರ್ವಜನಿಕರು ತೊಂದರೆ ಅನುಭವಿಸಿದರು.

ಕೆಲವರು ಜಾತಿ, ಆದಾಯ ಪ್ರಮಾಣ ಪತ್ರಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಸಹಿಗಾಗಿ ಹೋರಾಟ ಸ್ಥಳದಲ್ಲೇ ಕಾಯ್ದು ನಿಂತು ವಾಪಸ್ ಮರಳಿದ ಪ್ರಸಂಗಗಳು ಕಂಡು ಬಂದವು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ